7:46 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: 9 ತಿಂಗಳು ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ

16/07/2023, 19:30

ಮಂಗಳೂರು(reporterkarnataka.com): ಸುಮಾರು 9 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಅಡ್ಯಾರು ಸಮೀಪದ ಕಣ್ಣೂರು ಬಳಿಯ ಕರ್ಮರ್ ನಿವಾಸಿಯಾದ 35ರ ಹರೆಯದ ಸೈಯದ್ ಹಸೈನಾರ್ ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಈತನಿಗೆ ಮಂಗಳೂರಿನ
ಜೆಎಂಎಫ್ ಸಿ 3ನೇ ನ್ಯಾಯಾಲಯ 2014 ಅಕ್ಟೋಬರ್ 18ರಂದು 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು1,500 ರೂ‌. ದಂಡ ವಿಧಿಸಿತ್ತು. ನಂತರ ಆರೋಪಿಯು ಸುಮಾರು 9 ವರ್ಷಗಳಿಂದ ತಲೆಮರಿಸಿಕೊಂಡಿದ್ದು, ಈತನನ್ನು ಜುಲೈ 15ರಂದು ಉರ್ವಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಆರ್. ಜೈನ್ ಅವರು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ದಸ್ತಗಿರಿಗೆ ಮಾರ್ಗದರ್ಶನ ನೀಡಿದ್ದು, ಎಸಿಪಿ ಅಂಶು ಕುಮಾರ್,
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ದಿನೇಶ್ ಕುಮಾರ್, ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು