9:16 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಹಿಳೆಗೆ ಕಾಲ್ ಮಾಡುವಂತೆ ಪೀಡಿಸುತ್ತಿದ್ದ ಆರೋಪಿತ ವ್ಯಕ್ತಿಗೆ ಗಂಡನಿಂದ ಧರ್ಮದೇಟು: ರಸ್ತೆಯಲ್ಲಿ ಅಟ್ಟಾಡಿಸಿ ಏಟು ನೀಡಿದ ಪತಿ

16/07/2023, 19:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಿಳೆಯೊಬ್ಬರಲ್ಲಿ ಫೋನ್ ಕರೆ ಮಾಡುವಂತೆ ಪೀಡಿಸುತ್ತಿದ್ದ ಡಿಶ್ ರಿಪೇರಿ ಮಾಡುವ ವ್ಯಕ್ತಿಯನ್ನು ಮಹಿಳೆಯ ಗಂಡ ಅಟ್ಟಾಡಿಸಿ ಹೊಡೆದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ.


ಮಹಿಳೆಯರಿಗೆ ಮೊಬೈಲ್ ನಂಬರ್ ಕೊಟ್ಟು ಕಾಲ್ ಮಾಡುವಂತೆ ಡಿಶ್ ರಿಪೇರಿ ಮಾಡುವ ಬಶೀರ್ ಎಂಬಾತ ಪೀಡಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಕಟ್ಟೆಮನೆ ಗ್ರಾಮದ ವ್ಯಕ್ತಿಯೊಬ್ಬರ ಪತ್ನಿಗೆ ಮೊಬೈಲ್ ನಂಬರ್ ಆರೋಪಿ ಬಶೀರ್ ನೀಡಿದ ಹಿನ್ನೆಲೆಯಲ್ಲಿ ಮಹಿಳೆಯ ಗಂಡ ಬಶೀರ್ ನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಧರ್ಮದೇಟು ನೀಡಿದ್ದಾರೆ. ಇದೀಗ ಆ ವೀಡಿಯೋ ವೈರಲ್ ಆಗಿದೆ.ಬಶೀರ್ ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದಾನೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು