10:00 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ

17/07/2023, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ.


ರುಕ್ಮಿಣಿ (31) ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ನಿನ್ನೆ ಮಧ್ಯಾಹ್ನ 12 ಗಂಟೆಗೆ ರುಕ್ಮಿಣಿ ಅವರು ಸಾವನ್ನಪ್ಪಿದ್ದರು.
ಮಂಡ್ಯ ಜಿಲ್ಲೆಯ ರಾಗಿಮುದ್ದನಹಳ್ಳಿ ಮೂಲದ ರುಕ್ಮಿಣಿ ಅವರು ಮದುವೆಯಾಗಿ ಕಡೂರಿಗೆ ಬಂದಿದ್ದರು. ಮಂಡ್ಯದಿಂದ ಬಂದ ರುಕ್ಮಿಣಿ ಕುಟುಂಬಸ್ಥರು ಆಗಮಿಸಿದ್ದಾರೆ. ಮಗಳದ್ದು ಆತ್ಮಹತ್ಯೆಯಲ್ಲ. ಆತ್ಮಹತ್ಯೆಯೆಂದು ಪ್ರಕರಣ ಮರೆಮಾಚಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೂರು ದಾಖಲಿಸಿಕೊಳ್ಳಲು ಕಡೂರು ಪೊಲೀಸರ ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ಗಂಡ ಕಣ್ಣನ್ ವಿರುದ್ಧ ಕೊಲೆ ಆರೋಪವನ್ನು ರುಕ್ಮಿಣಿ ಕುಟುಂಬಸ್ಥರು ಮಾಡಿದ್ದಾರೆ. ಮದುವೆ ಆದಾಗಿನಿಂದಲೂ ಮಗಳಿಗೆ ಅತ್ತೆ-ಮಾವ, ಗಂಡ ಕಿರುಕುಳ ನೀಡುತ್ತಿದ್ದರು ಎಂದು ರುಕ್ಮಿಣಿ ಕಡೆಯವರು ಆರೋಪಿಸಿದ್ದಾರೆ.
13 ವರ್ಷಗಳ ಹಿಂದೆ ಕಡೂರಿನ ಕಣ್ಣನ್ ಗೆ ಮಂಡ್ಯದ ರುಕ್ಮಿಣಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು.
ರುಕ್ಮಿಣಿಗೆ ಹಲ್ಲೆ ಮಾಡಿರುವುದನ್ನು ಆಕೆಯ ಸಾವಿನ ನಂತರ ಪತಿ ಕಣ್ಣನ್ ಒಪ್ಪಿಕೊಂಡಿರುವ ಆಡಿಯೋವೊಂದು ಲಭ್ಯವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು