9:59 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಪತ್ನಿಗೆ ದೊಣ್ಣೆಯಿಂದ ಹೊಡೆದು ಕೊಲೆ: ಆರೋಪಿ ಪತಿ ಬಂಧನ; ಪ್ರಕರಣ ಮುಚ್ಚಿ ಹಾಕಲು ಹಂತಕನಿಂದ ಯತ್ನ

19/07/2023, 10:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಸಮೀಪದ ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೀಲಾಬಾಯಿ (38)ಮೃತಪಟ್ಟ ದುರ್ದೈವಿ. ಕಲ್ಲಕ್ಕಿ ಎಸ್ಟೇಟ್ ಲೈನಿನಲ್ಲಿ ದಾವಣಗೆರೆ ಮೂಲದ ಶಿವ ಹಾಗೂ ಪತ್ನಿ ಲೀಲಾಬಾಯಿ ಕಾರ್ಮಿಕರಾಗಿ ಎರಡು ವರ್ಷದಿಂದ ತೋಟದ ಕೆಲಸಕ್ಕೆ ಸೇರಿದ್ದರು. ಆಕೆಯ ಪತಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡಿದಿದ್ದು ಪತ್ನಿ ಲೀಲಾಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಂಗಳವಾರ ಸಹಜ ಸಾವಾಗಿದೆ ಎಂದು ತೋಟದ ವ್ಯವಸ್ಥಾಪಕರಿಗೆ ತಿಳಿಸಿದ್ದು ಸಾಕ್ಷ್ಯ ನಾಶ ಮಾಡಲು ಪತ್ನಿಯ ರಕ್ತಸಿಕ್ತ ಸೀರೆ ಬದಲಾಯಿಸಿ ಅನುಮಾನ ಬಾರದಂತೆ ಅಂತ್ಯ ಸಂಸ್ಕಾರ ಮಾಡಲು ಪತಿ ಶಿವ ಮುಂದಾಗಿದ್ದ ಎನ್ನಲಾಗಿದೆ.ಈ ಬಗ್ಗೆ ತೋಟದ ಮೇಲ್ವಿಚಾರಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳ ಮಹಜರು ನಡೆಸಿ ಆರೋಪಿ ಶಿವ ಎಂಬವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಆರೋಪಿ ಬಾಯಿಬಿಟ್ಟಿದ್ದಾನೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್,ಮೂಡಿಗೆರೆ ಸರ್ಕಲ್ ಇನ್ ಸ್ಪೆಕ್ಟರ್ ಸೋಮೇಗೌಡ, ಬಾಳೂರು ಸಬ್ ಇನ್ ಸ್ಪೆಕ್ಟರ್ ವಿ.ಶ್ರೀನಾಥ್ ರೆಡ್ಡಿ, ಎಎಸ್ಐಗಳಾದ ರಾಜು,ವಿಶ್ವನಾಥ್,ಹೆಡ್ ಕಾನ್ ಸ್ಟೇಬಲ್ ಶ್ರೀಧರ್, ಸಿಬ್ಬಂದಿಗಳಾದ ಗಿರೀಶ್,ಮನು,ಅಭಿಷೇಕ್,ಮಹೇಶ್, ಸತೀಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಶವವನ್ನು ಶವಾಗಾರಕ್ಕೆ ಸಾಗಿಸಲು ಜಾವಳಿಯ ಧರ್ಮಸ್ಥಳ ಶೌರ್ಯ ರಾಷ್ಟ್ರೀಯ ವಿಪತ್ತು ಘಟಕದ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು