9:57 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು