1:50 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು