10:03 AM Thursday25 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್: ಐಟಿ ಮತ್ತು ಬಿಟಿ ಸಚಿವ… ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು

ಇತ್ತೀಚಿನ ಸುದ್ದಿ

ಡೂಮ್ ಡೇ ಆರಾಧನೆ: ಕೆನ್ಯಾದಲ್ಲಿ ಮತ್ತೆ 12 ಮಂದಿ ಶವ ಪತ್ತೆ; ಮೃತರ ಸಂಖ್ಯೆ 400ಕ್ಕೇರಿಕೆ

19/07/2023, 14:26

ನೈರೋಬಿ(reporterkarnataka.com):
ಕೆನ್ಯಾದಲ್ಲಿ ಡೂಮ್‌ ಡೇ ಆರಾಧನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೇದಾರರು ಸೋಮವಾರ 12 ಮೃತದೇಹಗಳನ್ನು ಹೊರತೆಗೆದಿದ್ದು, ಇದರಿಂದ ಮೃತಪಟ್ಟವರ ಸಂಖ್ಯೆ 400 ದಾಟಿದೆ.
ಯೇಸು ಸ್ವಾಮಿಯನ್ನು ಸಂಧಿಸಲು ಸಾಯುವ ತನಕ ಉಪವಾಸ ವ್ರತಾಚರಣೆ ಇದಾಗಿದೆ. ಕರಾವಳಿ ಕೆನ್ಯಾದ ಮಲಿಂದಿ ಪಟ್ಟಣ ಬಳಿಯ ಶಕಹೋಲ ಅರಣ್ಯದಲ್ಲಿ ನೆಲೆಸಿರುವ ಪಂಥದೊಂದಿಗೆ ನಂಟು ಹೊಂದಿದ್ದ ಧಾರ್ಮಿಕ ನಾಯಕ ಪೌಲ್ ಮ್ಯಾಂಕಝಿ, ತನ್ನ ಅನುಯಾಯಿಗಳಿಗೆ ಈ ಆರಾಧನೆ ನಡೆಸುವಂತೆ ಉಪದೇಶಿಸಿದ್ದರು.
ಕಠೋರ ವ್ರತಾಚರಣೆಯಿಂದ ಹಲವರು ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೌಲ್ ಮತ್ತು 36 ಶಂಕಿತರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಇನ್ನಷ್ಟೇ ಇವರೆಲ್ಲರ ವಿರುದ್ಧ ದೋಷಾರೋಪ ಹೊರಿಸಬೇಕಿದೆ.
‘ಮೃತಪಟ್ಟವರ ಸಂಖ್ಯೆ 403ಕ್ಕೇರಿದ್ದು, 95 ಜನರನ್ನು ರಕ್ಷಿಸಲಾಗಿದೆ’ ಎಂದು ಕರಾವಳಿ ಪ್ರಾದೇಶಿಕ ಆಯುಕ್ತ ರೋಡಾ ಒನ್ಯಾಂಚ ಹೇಳಿದ್ದಾರೆ.
ಮಲಿಂದಿ ಪಟ್ಟಣದಲ್ಲಿ ಬೀಡುಬಿಟ್ಟಿರುವ ಕೆನ್ಯಾ ರೆಡ್‌ ಕ್ರಾಸ್‌ ಅಧಿಕಾರಿಗಳಿಗೆ 613 ಜನರು ನಾಪತ್ತೆಯಾಗಿರುವ ವರದಿ ದಾಖಲಾಗಿದೆ. ಪತ್ತೆದಾರರು ಸಾಮೂಹಿಕ ಸಮಾಧಿಗಳನ್ನು ಈಗಲೂ ಹುಡುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು