6:47 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸ್ಪೀಕರ್ ಪೀಠಕ್ಕೆ ಕಾಗದ ಪತ್ರ ಎಸೆತ: ಆರ್. ಅಶೋಕ್, ಅಶ್ವಥ್ ನಾರಾಯಣ, ಸುನಿಲ್ ಕುಮಾರ್ ಸಹಿತ 10 ಮಂದಿ ಬಿಜೆಪಿ ಶಾಸಕರ ಅಮಾನತು

19/07/2023, 18:22

ಬೆಂಗಳೂರು(reporterkarnataka.com):ವಿಧಾನಸಭೆ ಅಧಿವೇಶನದ ಸಮಯದಲ್ಲಿ ಡೆಪ್ಯುಟಿ ಸ್ವೀಕರ್ ಆಸೀನರಾಗಿದ್ದ ಸ್ಪೀಕರ್ ಪೀಠಕ್ಕೆ ಕಾಗದ ಪತ್ರ ಎಸೆದ ಘಟನೆಗೆ ಸಂಬಂಧಿಸಿದಂತೆ ಕರಾವಳಿಯ ಐವರು ಶಾಸಕರು ಸೇರಿದಂತೆ 10 ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.
ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಲಾಗಿದೆ.

ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನಿಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅವರ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ. ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?:
ಬಜೆಟ್ ಮೇಲಿನ ಚರ್ಚೆ ನಡೆಯುತ್ತಿತ್ತು. ಸ್ಪೀಕರ್ ಪೀಠದಲ್ಲಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಕುಳಿತ್ತಿದ್ದರು.
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜ್ಯದ ಸರಕಾರದ 5 ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು.
ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು. ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದಾರೆ. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದಿದ್ದಾರೆ. ಆದರೆ ಬಿಜೆಪಿ ಶಾಸಕರು ತಮ್ಮ ವರ್ತನೆಯನ್ನು ಮುಂದುವರಿಸಿದರು. ನಂತರ ಉಪ ಸಭಾಪತಿಯವರು ಸದನವನ್ನು ಮಧ್ಯಾಹ್ನ 3 ಗಂಟೆ ವರೆಗೆ ಮುಂದೂಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು