9:26 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ದೇಶ ವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಶಾಸಕ ಡಾ. ಭರತ್ ಶೆಟ್ಟಿ ಕಳವಳ

19/07/2023, 19:21

ಸುರತ್ಕಲ್(reporterkarnataka.com):ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ .ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳ ಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಖನ್ನು ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು