9:25 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ವಿರೋಧ ಪಕ್ಷವನ್ನು ಹತ್ತಿಕ್ಕುವ ಕಾರ್ಯ ಕಾಂಗ್ರೆಸ್ ಆಡಳಿತ ಮಾಡುತ್ತಿದೆ: ಶಾಸಕ ವೇದವ್ಯಾಸ ಕಾಮತ್

20/07/2023, 15:23

ಬೆಂಗಳೂರು(reporterkarnataka.com): ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಸರ್ವಾಧಿಕಾರಿ ಧೋರಣೆಯ ಮೂಲಕ ಸಂವಿಧಾನ ವಿರೋಧಿ ಕೆಲಸ ಮಾಡುತಿದ್ದು ಇವುಗಳನ್ನು ಮುಂದಿನ ದಿನಗಳಲ್ಲಿಯೂ ಗಟ್ಟಿ ಧ್ವನಿಯಲ್ಲಿ ವಿರೋಧಿಸುವುದಾಗಿ ಶಾಸಕ ಡಿ. ವೇದವ್ಯಾಸ
ಕಾಮತ್ ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಮುಖಂಡರ ಸ್ವಾಗತ ಹಾಗೂ ಉಪಚಾರಕ್ಕಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ಬಳಸಿಕೊಂಡಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸುತ್ತೇವೆ. ರಾಜ್ಯ ಸರಕಾರ ಆಡಳಿತವನ್ನು ದುರುಪಯೋಗಪಡಿಸುತ್ತಿದ್ದು ಅದನ್ನು ಪ್ರಶ್ನಿಸುವ ಸಂದರ್ಭದಲ್ಲಿ ಉತ್ತರ ನೀಡುವುದು ಸರಕಾರದ ಕರ್ತವ್ಯ. ಆದರೆ ಪ್ರಶ್ನಿಸುವವರನ್ನೇ ಅಧಿವೇಶನದಿಂದ ಅಮಾನತು ಮಾಡುವ ಸರಕಾರದ ನಡೆ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಹೇಳಿದರು.
ಗೌರವಾನ್ವಿತ ಸ್ಥಾನದಲ್ಲಿರುವ ಸ್ಪೀಕರ್ ಅವರು ಪಕ್ಷದ ವಕ್ತಾರರಂತೆ ವರ್ತಿಸುವ ಮೂಲಕ ವಿಧಾನಸಭೆಯ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಪ್ರತಿಭಟನೆಯನ್ನು ನೆಪವಾಗಿರಿಸಿ ವಿರೋಧ ಪಕ್ಷದ 10 ಸದಸ್ಯರನ್ನು ಅಮಾನತು ಮಾಡಲಾಗಿದೆ. ಈ ಹಿಂದೆ ವಿಧಾನಸಭೆಯಲ್ಲಿ ಗೊಂದಲವೆಬ್ಬಿಸಿ ದಾಂಧಲೆ ನಡೆಸಿದ್ದ ಘಟನೆಗಳನ್ನು ಆಡಳಿತ ಪಕ್ಷದ ನಾಯಕರು ನೆನಪಿಸಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತಿದ್ದು ಸರ್ವಾಧಿಕಾರಿಯಂತೆ ವರ್ತಿಸುವುದನ್ನು ವಿರೋಧಿಸುತ್ತೇವೆ. ರಾಜ್ಯ ಸರಕಾರದ ಈ ನೀತಿಯನ್ನು ಖಂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು