8:47 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮೀ ಯೋಜನೆ: ಸಹಾಯವಾಣಿ ಸ್ಥಾಪನೆ; ಸೇವಾ ಸಿಂಧು ಫೋರ್ಟಲ್ ಮೂಲಕವೇ ನೋಂದಣಿಗೆ ಅವಕಾಶ

21/07/2023, 21:07

ಉಡುಪಿ(reporterkarnataka.com): ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾಕೇಂದ್ರ, ನಗರ ಪ್ರದೇಶಗಳಿಗೆ ಸಂಬಂಧಿಸಿದಂತೆ ವಾರ್ಡ್ ಕಚೇರಿ ನೋಂದಣಿ ಕೇಂದ್ರದಲ್ಲಿ ನಿಗದಿಪಡಿಸಿರುವ ಫಲಾನುಭವಿಗಳ ವೇಳಾ ಪಟ್ಟಿಯಂತೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ನೋಂದಣಿ ಮಾಡಲಾಗುತ್ತಿದ್ದು, ಬಾಹ್ಯಮೂಲದ ಯಾವುದೇ ಅಪ್ಲಿಕೇಷನ್ ಅಥವಾ ವೆಬ್‌ಸೈಟ್ ಮೂಲಕ ನೋಂದಣಿ ಮಾಡಲು ಅವಕಾಶ ಇರುವುದಿಲ್ಲ. ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ ಸೌಲಭ್ಯ ಪಡೆದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು.
ಗೃಹಲಕ್ಷ್ಮೀ ನೋಂದಣಿ ವೇಳಾಪಟ್ಟಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಪಡಿತರ ಚೀಟಿ ಸಂಖ್ಯೆ ನಮೂದಿಸಿ ಹಾಗೂ ದೂರವಾಣಿ ಸಂಖ್ಯೆ 8147500500ಗೆ ಪಡಿತರಚೀಟಿ ಸಂಖ್ಯೆಯನ್ನು ಎಸ್‌ಎಂಎಸ್ ಮಾಡುವ ಮೂಲಕ ತಿಳಿದುಕೊಳ್ಳಬಹುದಾಗಿರುತ್ತದೆ.
ಗ್ರಾಮ ಒನ್ ಕೇಂದ್ರಕ್ಕೆ ಸ್ಥಳೀಯ ಗ್ರಾಮಾಡಳಿತ ಅಧಿಕಾರಿ, ಬಾಪೂಜಿ ಸೇವಾ ಕೇಂದ್ರಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಪಿ.ಡಿ.ಓ, ನಗರ ಪ್ರದೇಶಕ್ಕೆ ಸಂಬAಧಿಸಿದAತೆ ಕರ್ನಾಟಕ ಒನ್ ಹಾಗೂ ವಾರ್ಡ್ ಕಛೇರಿ ನೋಂದಣಿ ಕೇಂದ್ರಕ್ಕೆ ನಗರಾಡಳಿತ ಇಲಾಖೆಗೆ ಸಂಬAಧಿಸಿದ ಕಂದಾಯ ಅಧಿಕಾರಿ, ಆರೋಗ್ಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದ್ದು, ಗೃಹಲಕ್ಷಿö್ಮ ಯೋಜನೆಯ ಮಾರ್ಗಸೂಚಿ ಹಾಗೂ ಆನ್‌ಲೈನ್ ನೋಂದಣಿ ಸಮಸ್ಯೆಗಳ ಬಗ್ಗೆ ಈ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ 1902 ಉಚಿತ ಸಹಾಯವಾಣಿ ಸಂಖ್ಯೆಗೆ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಕರೆ ಮಾಡಬಹುದು ಅಥವಾ ತಾಲೂಕುವಾರು ಸಹಾಯವಾಣಿ ಉಡುಪಿ ತಾಲೂಕು ದೂ.ಸಂಖ್ಯೆ: 0820-2520417, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444, ಕುಂದಾಪುರ ದೂ.ಸಂಖ್ಯೆ: 08254-230357, ಬೈಂದೂರು ದೂ.ಸಂಖ್ಯೆ: 08254-251657, ಕಾರ್ಕಳ ದೂ.ಸಂಖ್ಯೆ: 08258-230201, ಹೆಬ್ರಿ ದೂ.ಸಂಖ್ಯೆ: 08253-250201 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 0820-2574802/ ಉಚಿತ ಸಹಾಯವಾಣಿ 1077 ಅನ್ನು ಬೆಳಗ್ಗೆ 10 ಗಂಟೆಯಿAದ ಸಂಜೆ 5.30 ರವರೆಗೆ ಕರೆ ಮಾಡಬಹುದು ಅಥವಾ ಸ್ಥಳೀಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು