7:47 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಸಾಲಿಗ್ರಾಮ ಪ.ಪಂ.: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

21/07/2023, 20:48

ಉಡುಪಿ(reporterkarnataka.com): ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ ಈಗಾಗಲೇ ಹಲವಾರು ಬಾರಿ ತಿಳಿಸಿದ್ದರೂ ನಿಷೇಧಿತ ಬ್ಲ್ಯಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು ಕಂಡುಬರುತ್ತಿದೆ.
ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸಬೇಕು. ತಪ್ಪಿದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ವಶಪಡಿಸಿಕೊಳ್ಳುವುದರ ಜೊತೆಗೆ ಈ ಅಧಿಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ದಂಡ ವಿಧಿಸಿ, ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬAಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು