12:53 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಅಬ್ಬರ: ತರೀಕೆರೆ, ಎನ್. ಆರ್. ಪುರದಲ್ಲಿ ಮನೆ ಕುಸಿತ

22/07/2023, 12:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ-ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ ಮನೆ ಮಳೆಗೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಬಿದಿರಿನಿಂದ ಕಟ್ಟಿದ್ದ ಮನೆಯಾಗಿದ್ದು ಕಳೆದ 20 ವರ್ಷಗಳಿಂದ ಅದೇ ಮನೆಯಲ್ಲಿ ವಾಸವಿದ್ದರು. ಕಳೆದ ಎರಡು ದಿನಗಳಿಂದ ಮಲೆನಾಡಲ್ಲಿ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಗಾಳಿಗೆ ಮನೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಮನೆ ಕುಸಿದು ಬೀಳುವ ಆತಂಕ ಮನೆಯವರಿಗೆ ಎದುರಾಗಿದೆ. ರಮೇಶ್ ಇಬ್ಬರು ಮಕ್ಕಳೊಡನೆ ಅದೇ ಮನೆಯಲ್ಲಿ ವಾಸವಿದ್ದಾರೆ. ರಮೇಶ್ ಪಂಚಾಯಿತಿ ನೀಡುವ ಮನೆಗೆ ಕಳೆದ 5 ವರ್ಷದಿಂದ 3 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಮನೆ ಮಂಜೂರಾಗಿಲ್ಲ. ಇನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲ್‍ನಲ್ಲಿ ಮನೆಯ ಗೋಡೆಗೆ ಶೀತ ಹೆಚ್ಚಾಗಿ ಬೀಸಿದ ಗಾಳಿಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸೀತಾಪುರಕಾವಲ್ ಗ್ರಾಮದ ನಟೇಶ್ ಎಂಬುವರ ಮನೆ ಮಧ್ಯಾಹ್ನ ಅಡುಗೆ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದಿದೆ. ಮನೆ ಭಾಗಶಃ ನಾಶವಾಗಿದೆ. ಮಳೆ-ಗಾಳಿ ಹೀಗೆ ಮುಂದುವರೆದರೆ ಉಳಿದಿರೋ ಅಲ್ಪಸ್ವಲ್ಪ ಕೂಡ ಕುಸಿದು ಬೀಳಲಿದೆ. ಮನೆಯಲ್ಲಿದ್ದ ಪಾತ್ರೆ ದವಸ-ಧಾನ್ಯಗಳು ನಾಶವಾಗಿವೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು