10:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಅಬ್ಬರ: ತರೀಕೆರೆ, ಎನ್. ಆರ್. ಪುರದಲ್ಲಿ ಮನೆ ಕುಸಿತ

22/07/2023, 12:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ-ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ ಮನೆ ಮಳೆಗೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಬಿದಿರಿನಿಂದ ಕಟ್ಟಿದ್ದ ಮನೆಯಾಗಿದ್ದು ಕಳೆದ 20 ವರ್ಷಗಳಿಂದ ಅದೇ ಮನೆಯಲ್ಲಿ ವಾಸವಿದ್ದರು. ಕಳೆದ ಎರಡು ದಿನಗಳಿಂದ ಮಲೆನಾಡಲ್ಲಿ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಗಾಳಿಗೆ ಮನೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಮನೆ ಕುಸಿದು ಬೀಳುವ ಆತಂಕ ಮನೆಯವರಿಗೆ ಎದುರಾಗಿದೆ. ರಮೇಶ್ ಇಬ್ಬರು ಮಕ್ಕಳೊಡನೆ ಅದೇ ಮನೆಯಲ್ಲಿ ವಾಸವಿದ್ದಾರೆ. ರಮೇಶ್ ಪಂಚಾಯಿತಿ ನೀಡುವ ಮನೆಗೆ ಕಳೆದ 5 ವರ್ಷದಿಂದ 3 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಮನೆ ಮಂಜೂರಾಗಿಲ್ಲ. ಇನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲ್‍ನಲ್ಲಿ ಮನೆಯ ಗೋಡೆಗೆ ಶೀತ ಹೆಚ್ಚಾಗಿ ಬೀಸಿದ ಗಾಳಿಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸೀತಾಪುರಕಾವಲ್ ಗ್ರಾಮದ ನಟೇಶ್ ಎಂಬುವರ ಮನೆ ಮಧ್ಯಾಹ್ನ ಅಡುಗೆ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದಿದೆ. ಮನೆ ಭಾಗಶಃ ನಾಶವಾಗಿದೆ. ಮಳೆ-ಗಾಳಿ ಹೀಗೆ ಮುಂದುವರೆದರೆ ಉಳಿದಿರೋ ಅಲ್ಪಸ್ವಲ್ಪ ಕೂಡ ಕುಸಿದು ಬೀಳಲಿದೆ. ಮನೆಯಲ್ಲಿದ್ದ ಪಾತ್ರೆ ದವಸ-ಧಾನ್ಯಗಳು ನಾಶವಾಗಿವೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು