8:23 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಬಜೆಟ್ ಅಧಿವೇಶನ ಸಮಾಪನ: ಸ್ಪೀಕರ್ ಖಾದರ್ ಅವರಿಂದ ಕಲಾಪಗಳ ವಿವರ

22/07/2023, 12:15

ಬೆಂಗಳೂರು(reporterkarnataka.com): ರಾಜ್ಯಪಾಲರ ಭಾಷಣದೊಂದಿಗೆ ಜುಲೈ 3ರಂದು ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ವಾದ- ವಿವಾದ, ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಮುಕ್ತಾಯಗೊಂಡಿದ್ದು, ವಿಧಾನ ಸಭೆಯಲ್ಲಿ ನಡೆದ ಕಾರ್ಯಕಲಾಪಗಳ ವರದಿಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಮಾಧ್ಯಮಗಳಿಗೆ ನೀಡಿದರು.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದಲ್ಲಿ 34 ಸದಸ್ಯರು 12 ಗಂಟೆ ಮತ್ತು 39 ನಿಮಿಷಗಳ ಕಾಲ ಭಾಗವಹಿಸಿರುತ್ತಾರೆ ಎಂದ ಸ್ಪೀಕರ್ ಅಧಿವೇಶನದಲ್ಲಿ ಒಟ್ಟು 1049 ಪ್ರಶ್ನೆಗಳನ್ನು ಅಂಗೀಕರಿಸಲಾಯಿತು ಎಂದು ಹೇಳಿದರು.

15 ದಿನಗಳ ಕಾಲ ನಡೆದ ವಿಧಾನಸಭಾ ಅಧಿವೇಶನದಲ್ಲಿ ಒಟ್ಟು 78 ಗಂಟೆ 25 ನಿಮಿಷ ಕಾರ್ಯಕಲಾಪಗಳು ನಡೆದವು ಎಂದು ಖಾದರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಮಂಡಿಸಿದ ಬಜೆಟ್-2023 ಅನ್ನು ಜುಲೈ 20 ರಂದು ಅಂಗೀಕರಿಸಲಾಯಿತು ಎಂದು ಸಭಾಪತಿ ಹೇಳಿದರು.
3ರಂದು ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು