8:28 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಬಿಜೈ ಕಾಪಿಕಾಡಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಅಳಪೆ ನಿವಾಸಿ ಇಬ್ಬರು ಆರೋಪಿಗಳ ಬಂಧನ; ನ್ಯಾಯಾಲಯಕ್ಕೆ ಹಾಜರು

22/07/2023, 17:34

ಮಂಗಳೂರು(reporterkarnataka.com): ನಗರದ ಬಿಜೈ ಕಾಪಿಕಾಡ್ ನ ಬಳಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸರು ಇಬ್ಬರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಬೀಚ್ ಗೆ ಹೋಗಿ ವಾಪಸ್ಸು ಬರುವಾಗ ಅವರನ್ನು ಹಿಂಬಾಲಿಸಿಕೊಂಡು ಬಂದು ಬಿಜೈ ಕಾಪಿಕಾಡ್ ನ 7 ನೇ ಕ್ರಾಸ್ ನಲ್ಲಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಳಪೆ ನಿವಾಸಿಗಳಾದ ದೀಕ್ಷಿತ್ (32) ಹಾಗೂ ಅಳಪೆ
ಲಾಯ್ಡ್ ಪಿಂಟೋ(32) ಎಂಬವರುಗಳನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು