8:47 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಸ್ಪೀಕರ್ ಖಾದರ್ ಚಾಲನೆ: ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

22/07/2023, 21:35

ಮಂಗಳೂರು(reporterkarnataka.com): ಅರೋಗ್ಯಪೂರ್ಣ ಶರೀರಕ್ಕೆ ಆಟೋಟ ಸ್ಪರ್ಧೆಗಳು ಸಹಕರಿಯಾಗಿದ್ದು ಯುವಜನರು ಫುಟ್ಬಾಲ್, ಕಬಡ್ಡಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಶನಿವಾರ ನಗರದ ನೆಹರೂ ಮೈದಾನ ಫುಟ್‌ಬಾಲ್ ಗ್ರೌಂಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮೇಯರ್ ಜಯಾನಂದ ಅಂಚನ್ ಮಾತನಾಡಿ, ದ ಕ ಜಿಲ್ಲಾ ಫುಟ್ಬಾಲ್ ಸಂಸ್ಥೆಯು ನಿರಂತರವಾಗಿ ಫುಟ್ಬಾಲ್ ಪಂದ್ಯಾಟವನ್ನು ಆಯೋಜಿಸಿ ಯುವಕರನ್ನು ಕ್ರೀಡಾಸಕ್ತಿಗೆ ತೊಡಗಿಸುವ ಕಾರ್ಯ ಅಭಿನಂದನೀಯ ಎಂದರು.
ದ.ಕ ಜಿಲ್ಲಾ ಫುಟ್‌ಬಾಲ್ ಅಧ್ಯಕ್ಷ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ಅಬ್ದುಲ್ ರವೂಫ್, ಶಂಸುದ್ದೀನ್ ಬಂದರ್, ಕ್ರೀಡೋದ್ಯಮಿ ಶರೀಫ್, ಯು.ಆರ್. ಅಕಾಡೆಮಿ ಸ್ಥಾಪಕಾಧ್ಯಕ್ಷ ಉಮೇಶ್ ಉಚ್ಚಿಲ್, ಯೆನಪೋಯ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಸುಜಿತ್ ಕೆ.ವಿ.ಅಸೋಸಿಯೇಶನ್ ಉಪಾಧ್ಯಕ್ಷ ಬಿ.ಬಿ.ಥೋಮಸ್, ಕಾರ್ಯದರ್ಶಿ ಹುಸೈನ್ ಬೋಳಾರ್, ಖಜಾಂಚಿ ಫಿರೋಜ್ ಉಳ್ಳಾಲ್, ಸದಸ್ಯ ಅಬ್ದುಲ್ ಲತೀಫ್ ಬೆಂಗರೆ ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಡ್ರಗ್ಸ್ ವಿರುದ್ಧ ಯುವ ಸಮೂಹ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು. ನೆಹರೂ ಮೈದಾನದಿಂದ ಆರಂಭವಾಗಿ ಎ.ಬಿ.ಶೆಟ್ಟಿ ವೃತ್ತ, ಹ್ಯಾಮಿಲ್ಟನ್ ರಾವ್ ಆಂಡ್ ರಾವ್ ಸರ್ಕಲ್, ಲೇಡಿಗೋಷನ್, ಕ್ಲಾಕ್ ಟವರ್ ಮೂಲಕವಾಗಿ ನೆಹರೂ ಮೈದಾನದ ವರೆಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು