1:07 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಸ್ಪೀಕರ್ ಖಾದರ್ ಚಾಲನೆ: ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

22/07/2023, 21:35

ಮಂಗಳೂರು(reporterkarnataka.com): ಅರೋಗ್ಯಪೂರ್ಣ ಶರೀರಕ್ಕೆ ಆಟೋಟ ಸ್ಪರ್ಧೆಗಳು ಸಹಕರಿಯಾಗಿದ್ದು ಯುವಜನರು ಫುಟ್ಬಾಲ್, ಕಬಡ್ಡಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಶನಿವಾರ ನಗರದ ನೆಹರೂ ಮೈದಾನ ಫುಟ್‌ಬಾಲ್ ಗ್ರೌಂಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮೇಯರ್ ಜಯಾನಂದ ಅಂಚನ್ ಮಾತನಾಡಿ, ದ ಕ ಜಿಲ್ಲಾ ಫುಟ್ಬಾಲ್ ಸಂಸ್ಥೆಯು ನಿರಂತರವಾಗಿ ಫುಟ್ಬಾಲ್ ಪಂದ್ಯಾಟವನ್ನು ಆಯೋಜಿಸಿ ಯುವಕರನ್ನು ಕ್ರೀಡಾಸಕ್ತಿಗೆ ತೊಡಗಿಸುವ ಕಾರ್ಯ ಅಭಿನಂದನೀಯ ಎಂದರು.
ದ.ಕ ಜಿಲ್ಲಾ ಫುಟ್‌ಬಾಲ್ ಅಧ್ಯಕ್ಷ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ಅಬ್ದುಲ್ ರವೂಫ್, ಶಂಸುದ್ದೀನ್ ಬಂದರ್, ಕ್ರೀಡೋದ್ಯಮಿ ಶರೀಫ್, ಯು.ಆರ್. ಅಕಾಡೆಮಿ ಸ್ಥಾಪಕಾಧ್ಯಕ್ಷ ಉಮೇಶ್ ಉಚ್ಚಿಲ್, ಯೆನಪೋಯ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಸುಜಿತ್ ಕೆ.ವಿ.ಅಸೋಸಿಯೇಶನ್ ಉಪಾಧ್ಯಕ್ಷ ಬಿ.ಬಿ.ಥೋಮಸ್, ಕಾರ್ಯದರ್ಶಿ ಹುಸೈನ್ ಬೋಳಾರ್, ಖಜಾಂಚಿ ಫಿರೋಜ್ ಉಳ್ಳಾಲ್, ಸದಸ್ಯ ಅಬ್ದುಲ್ ಲತೀಫ್ ಬೆಂಗರೆ ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಡ್ರಗ್ಸ್ ವಿರುದ್ಧ ಯುವ ಸಮೂಹ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು. ನೆಹರೂ ಮೈದಾನದಿಂದ ಆರಂಭವಾಗಿ ಎ.ಬಿ.ಶೆಟ್ಟಿ ವೃತ್ತ, ಹ್ಯಾಮಿಲ್ಟನ್ ರಾವ್ ಆಂಡ್ ರಾವ್ ಸರ್ಕಲ್, ಲೇಡಿಗೋಷನ್, ಕ್ಲಾಕ್ ಟವರ್ ಮೂಲಕವಾಗಿ ನೆಹರೂ ಮೈದಾನದ ವರೆಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು