8:23 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಉತ್ತರ ಕನ್ನಡ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು; ಮನೆ, ತೋಟಕ್ಕೆ ನುಗ್ಗಿದ ಪ್ರವಾಹ; ಜನಜೀವನ ಅಸ್ತವ್ಯಸ್ತ

23/07/2023, 12:06

ಕಾರವಾರ(reporter Karnataka.com): ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಜನಕಡ್ಕಲ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಉಂಟಾಗಿದೆ. ನದಿಯಲ್ಲಿ ನೀರಿನ ಒಳಹರಿವು ಭಾನುವಾರ ಹೆಚ್ಚಳವಾಗಿದೆ. ಇದರ ಪರಿಣಾಮ ನದಿ ಪ್ರದೇಶದ ವ್ಯಾಪ್ತಿಯಲ್ಲಿನ ತೋಟ, ಗದ್ದೆ,ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.


ಗುಂಡಿಬೈಲ್ ಹಿತ್ಲಕೇರಿ, ಚಿಕ್ಕನಕೋಡ ಹಿತ್ಲಕೇರಿ, ಮುಟ್ಟಾ, ಹೆಬೈಲ್, ಕೆಂಚಗಾರ, ಚಿಕ್ಕನಕೋಡ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನದಿ ಅಂಚಿನ ಮನೆಗಳಿಗೆ ನೆರೆಯ ನೀರು ನುಗ್ಗಿದೆ. ಪರಿಣಾಮ ಜನರು ಆತಂಕದಲ್ಲಿ ಇದ್ದಾರೆ. ನದಿಯ ನೀರಿನ ಹರಿವು ಹೆಚ್ಚಾದಂತೆ ಮನೆಯ ಒಳಗೆ ಹೋಗುವ ಸಾಧ್ಯತೆ ಇದ್ದು, ದೋಣಿಯ ಮೂಲಕ ಜನ,ಜಾನುವಾರು ಸಾಗಾಟಕ್ಕೆ ತಾಲ್ಲೂಕು ಆಡಳಿತ ಸಜ್ಜಾಗಿದೆ.
ಕಾಳಜಿ ಕೇಂದ್ರಕ್ಕೆ ಜನರು ತೆರಳಲು ಸಿದ್ದವಾಗಿದ್ದಾರೆ. ಜನರನ್ನು ಸುರಕ್ಷಿತ ಪುನರ್‌ ವಸತಿಗೆ ಗ್ರಾಮ ಪಂಚಾಯಿತಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರದಲ್ಲಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ನೋಡಲ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.
ಸ್ಥಳೀಯರ ತೋಟ, ಗದ್ದೆಗಳಿಗೆ ನೀರು ನುಗ್ಗಿದ್ದು, ಜನರು ಜಾನುವಾರುಗಳ ಜತೆಗೆ ಸ್ಥಳಾಂತರಕ್ಕೆ ಅಗತ್ಯ ಸಿದ್ದತೆಗಳು ಮಾಡಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಬಾಸ್ಕೇರಿ ಹೊಳೆಯಲ್ಲಿ ಕೂಡ ನೀರು ತುಂಬಿ ಹರಿಯುತ್ತಿದೆ. ನದಿ ಅಂಚಿನ ತೋಟಗಳು ಜಲಾವೃತ ಆಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು