11:54 PM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಕೋವಿಡ್ ಲಸಿಕೆ

15/05/2021, 19:38

ಕೋಲಾರ(reporterkarnataka news): ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು . 

ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ , ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಸರ್ಕಾರ ಪತ್ರಕರ್ತರನ್ನು ಪ್ರಂಟ್‌ಲೈನ್ ವರ್ಕರ್ ಎಂದು ಘೋಷಿಸಿರುವುದು ಸಂತೋಷದ ವಿಷಯವಾಗಿದೆ . ಎಲ್ಲಾ ಪತ್ರಕರ್ತರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಇದರ ಸದುಪಯೋಗವನ್ನು ಸದ್ಬಳಕೆ ಮಾಡಿಕೊಳ್ಳಬೇಕು . ಇದುವರೆಗೆ 140 ಪತ್ರಕರ್ತರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ನೀಡುವುದರ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು , ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ , ಖಜಾಂಚಿ ಎ.ಜಿ.ಸುರೇಶ್ ಕುಮಾರ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು