1:14 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಣಿಪುರ ಮಹಿಳಾ ದೌರ್ಜನ್ಯ ಭಾರತೀಯರೇ ತಲೆತಗ್ಗಿಸುವಂತ ಘಟನೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

23/07/2023, 22:33

ಮಂಗಳೂರು(reporterkarnataka.com):ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಬಳಿಕ ಸಾಮೂಹಿಕವಾಗಿ ಅಮಾನವೀಯವಾಗಿ ಅತ್ಯಾಚಾರ ಎಸಗಿರವುದು ಇಡೀ ಭಾರತೀಯರನ್ನೇ ತಲೆತಗ್ಗಿಸುವಂತೆ ಮಾಡಿದೆ.
ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು.
ಮಹಿಳೆಯರನ್ನು ದೇವರಂತೆ ಪೂಜಿಸುವ ದೇಶ ನಮ್ಮದು. ಆದರೆ ಇಲ್ಲಿ ಸ್ತ್ರೀಯರ ಮೇಲೆ ನಡೆಯುತ್ತಿರವ ಹೇಯ ದೌರ್ಜನ್ಯ ನಾಗರಿಕ ಸಮಾಜವನ್ನೇ ಪ್ರಶ್ನಿಸುವಂತೆ ಮಾಡಿದೆ.
ಜನಾಂಗೀಯ ಗಲಭೆ ಆರಂಭವಾಗಿ ನಾಲ್ಕು ತಿಂಗಳು ಕಳೆದರೂ ಪರಿಸ್ಥಿತಿ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ಅಲ್ಲಿನ ರಾಜ್ಯ ಸರ್ಕಾರ ಸಂಪೂರ್ಣ ವಿಲವಾಗಿದೆ. ಕಾನೂನು ಸುವ್ಯವಸ್ಥೆಯ ಅಂಕೆ ಮೀರಿ ಸಾವುನೋವುಗಳು ಸಂಭವಿಸುತ್ತಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.
ಮಣಿಪುರದಲ್ಲಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇಲ್ಲಿನ ಪೈಶಾಚಿಕ ಕೃತ್ಯದಿಂದ ಮಣಿಪುರ ಸರ್ಕಾರದ್ದು ಮಾತ್ರವಲ್ಲ, ದೇಶದ ಮರ್ಯಾದೆಯೇ ಹೋಗಿದೆ. ಇದು ಮಹಿಳಾ ಸಮಾಜದ ಮೇಲಿನ ಪ್ರಹಾರ. ಕೃತ್ಯ ನಡೆದು ಎರಡು ವಾರವಾದರೂ ಪ್ರಧಾನಿ, ಕೇಂದ್ರ ಗೃಹ ಸಚಿವರ ಸಹಿತ ಆಡಳಿತ ವ್ಯವಸ್ಥೆ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾದ ನಂತರವಷ್ಟೇ ಪ್ರಧಾನಿ ಪ್ರತಿಕ್ರಿಯಿಸಿರವುದು ದುರದೃಷ್ಟಕರ. ವಿದೇಶದಲ್ಲಿ ನಮ್ಮ ಪ್ರಧಾನಿಯವರು ಮಹಿಳೆಯರ ರಕ್ಷಣೆಯ ಬಗ್ಗೆ ಭಾಷಣ ಮಾಡುತ್ತಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯದ ಬಗ್ಗೆ ಹೇಳಿಕೆ ಬಿಟ್ಟರೆ ಏನು ಕ್ರಮ ಕೈಗೊಂಡಿದ್ದಾರೆ? ಸರ್ಕಾರದ ಮೌನ ಲಜ್ಜೆಗೇಡಿತನ ಹಾಗು ಅಲ್ಲಿ ಆಡಳಿತ ವ್ಯವಸ್ಥೆ ಇದೆಯೋ, ಇಲ್ಲವೋ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಇದು ಕೇವಲ ಅವರ ನೋವಲ್ಲ, ನಮ್ಮ ನೋವೂ ಆಗಿದೆ. ಹಾಗಾಗಿ ದೌರ್ಜನ್ಯಕ್ಕೀಡಾದ ಮಹಿಳೆಯರ ಪರ ನಾವೆಲ್ಲ ನಿಲ್ಲಬೇಕಿದೆ ಎಂದು ಪದ್ಮರಾಜ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು