6:27 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ವಿಧಾನಸಭೆ ಆವರಣದಲ್ಲೂ ಔಷಧೀಯ ಸಸ್ಯಗಳಿಗೆ ಅವಕಾಶ: ಹರೇಕಳದಲ್ಲಿ ಸ್ಪೀಕರ್ ಯು.ಟಿ. ಖಾದರ್

24/07/2023, 21:34

ಉಳ್ಳಾಲ(reporterkarnataka.com): ಸಚಿವರುಗಳು 24 ಗಂಟೆಯೂ ಎಸಿಯೊಳಗೆ ಕುಳಿತು ಆರೋಗ್ಯದತ್ತ ಗಮನಹರಿಸುವುದು ಕಡಿಮೆ. ಹಾಗಾಗಿ ವಿಧಾನಸಭೆ ಆವರಣದೊಳಗಡೆ ಆರೋಗ್ಯಕ್ಕೆ ಪೂರಕವಾಗುವಂತಹ ಔಷಧೀಯ ಗುಣಗಳ ಸಸ್ಯಗಳನ್ನು ನೆಡಲು ತೀರ್ಮಾನಿಸಲಾಗಿದೆ ಎಂದು ಸ್ಪೀಕರ್ ಯು.ಟಿ‌ ಖಾದರ್ ಹೇಳಿದರು.

ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿವಿ, ಯೆನೆಪೋಯ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ವಿಭಾಗ ಹಾಗೂ ಹರೇಕಳ ಗ್ರಾಪಂ ಸಹಭಾಗಿತ್ವದಲ್ಲಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರ ಹರೇಕಳದಲ್ಲಿ ಆರೋಗ್ಯ ಸೇವೆಯ ಆರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಯಾರು ಹಸ್ತ ಕ್ಷೇಪ ಮಾಡಬಾರದು. ವೈದ್ಯರಿಗೆ ಮುಕ್ತ ವಾಗಿ ಕಾರ್ಯ ನಿರ್ವಹಿಸಲು ಬಿಡಿ.ಏನೆ ಕುಂದು ಕೊರತೆ ಇದ್ದಲ್ಲಿ ಪಂಚಾಯತ್ ಕಛೇರಿ ಗೆ ಹೋಗಿ ದೂರು ದಾಖಲಿಸಿ,ಕುಂದು ಕೊರತೆ ನೀವಾರಿಸಲು ಆ ಮೂಲಕ ಸಹಕರಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ರೋಗ ಬಂದು ಮದ್ದು ಮಾಡುವ ಬದಲು ರೋಗ ಬರುವ ಮುಂಚೆ ಜಾಗೃತಿ ವಹಿಸಿ ಎಂದು ವೈದ್ಯರಿಗೆ ಕಿವಿ ಮಾತು ಹೇಳಿದರು.
ಇಲ್ಲಿ ಆಯುಷ್ ಹಾಗೂ ಡೆಂಟಲ್ ಚಿಕಿತ್ಸೆ ದೊರೆಯುತ್ತದೆ. ಸದುಪಯೋಗ ಪಡೆದುಕೊಳ್ಳಿ ಎಂದರು.


ಪ್ರಕೃತಿಯಿಂದ ದೊರಕುವಂತಹ ಔಷಧೀಯ ಗಿಡಗಳಿಂದ ಹೊರಬರುವ ಆಮ್ಲಜನಕವನ್ನು ಆಸ್ವಾದಿಸುವ ಮೂಲಕ ಆರೋಗ್ಯಪೂರ್ಣವಾಗಿ ಬಾಳಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಹರೇಕಳದಲ್ಲಿ ಆರಂಭವಾದ ಆರೋಗ್ಯ ಸೇವೆಯಲ್ಲಿ
ಆಯುಷ್ ಸಂಬಂಧಪಟ್ಟ ವಿಚಾರಗಳು ಹೆಚ್ಚಾಗಿ ಉಪಯೋಗಕ್ಕೆ ಬರಲಿ. ಗಿಡಮೂಲಿಕೆಗಳ ಔಷಧೀಯ ಗುಣಗಳ ಹೆಚ್ಚಾಗಿ ಜನರಿಗೆ ತಲುಪುವಂತಹ ವಿಚಾರವಾಗಲಿ. ಔಷಧೀಯ ಸಸ್ಯಗಳ ಮರಗಳ ಮೌಲ್ಯಗಳನ್ನು ಜನರಿಗೆ ತಿಳಿಸುವ ಕಾರ್ಯ ಆಯುಷ್ ವಿಭಾಗದಿಂದ ಆಗಲಿ. ಹರೇಕಳದಲ್ಲಿ ಶೀಘ್ರದಲ್ಲಿ ಡಯಾಲಿಸಿಸ್ ಕೇಂದ್ರವೂ ಸ್ಥಾಪನೆಯಾಗಬೇಕಿದೆ. ಇದಕ್ಕೆ ಪೂರಕವಾದ ವಾತಾವರಣ ಆಸ್ಪತ್ರೆಯಿಂದ ಆಗಬೇಕಿದೆ ಎಂದು ಸ್ಪೀಕರ್,ಶಾಸಕ ಯು.ಟಿ ಖಾದರ್ ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಆನಂದ್ ಮಾತನಾಡಿ ಶುಭ ಹಾರೈಸಿದರು.
ಹರೇಕಳ ಗ್ರಾಪಂ ಅಧ್ಯಕ್ಷ ಬದ್ರುದ್ದೀನ್, ಯೆನೆಪೋಯ ಪರಿಗಣಿತ ವಿವಿಯ ಕುಲಪತಿ ಡಾ.ಎಂ.ವಿಜಯಕುಮಾರ್,ಸಹಕುಲಪತಿ ಡಾ.ಬಿ.ಎಚ್. ಶ್ರೀಪತಿ ರಾವ್, ವೈದ್ಯಕೀಯ ಅಧೀಕ್ಷಕ ಡಾ.ಹಬೀಬ್ ರೆಹಮಾನ್ ಎ.ಎ., ಹರೇಕಳ ಉಪಾಧ್ಯಕ್ಷೆ ಕಲ್ಯಾಣಿ, ಡಾ. ಎಂ.ಎಸ್. ಮೂಸಬ್ಬ, ಡಾ.ಪೂನಮ್ ಪಿ.ನಾಯಕ್, ಡಾ.ಬಿ.ಟಿ. ನಂದೀಶ್, ಮುತ್ತಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು