5:15 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಳೆ ಬಂದ್ರೆ ನರಕಯಾತನೆ ಅನುಭವಿಸುವ  ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು?

23/07/2021, 08:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ.

ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗಳಿದ್ದರೂ ಅದು ಹೇಗೆ ಬಳಕೆಯಾಗುತ್ತಿಲ್ಲ ಎನ್ನುವುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ.


ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದರೆ ವೃದ್ಧರು, ಗರ್ಭಿಣಿಯರು , ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇದೆಲ್ಲ ಗೊತ್ತಿದ್ದರೂ ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆ. ಜನರ ಕೂಗು ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಡನಬಾವಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು ಇದರ ಬಗ್ಗೆ ಗಮನಹರಿಸುವ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನರಕಯಾತನೆ ಅನುಭವಿಸುತ್ತಿರುವ ತಿಪ್ಪಯ್ಯ ಸ್ವಾಮಿ ಸಾಲಿಮಠ ಅವರ ವಾರ್ಡಿನ ನೀರನ್ನು ಹೋಗುವುದಕ್ಕೆ ಅನುಕೂಲ ಮಾಡಿ ಆ ವಾರ್ಡಿನ ಗ್ರಾಮದ ಜನರಿಗೆ ದಾರಿದೀಪ ವಾಗಬೇಕೆಂದು ವಾರ್ಡಿನ ಜನರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಯಾವಾಗ ಕಾರ್ಯರೂಪಕ್ಕೆ ತರುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು