6:27 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಭಾರೀ ವರ್ಷಧಾರೆ: ಬಜಾಲ್ ನಲ್ಲಿ ಹೋಟೆಲ್, ವಿದ್ಯುತ್ ತಂತಿ ಮೇಲೆ ಬಿದ್ದ ಮರ; ಮಳೆಯಲ್ಲೂ ಲೈನ್ ಮ್ಯಾನ್ ದುರಸ್ತಿ ಕಾರ್ಯ

24/07/2023, 20:25

ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ತಗ್ಗು ಪ್ರದೇಶ ಜಲಾವೃತವಾಗಿದೆ. ಬಜಾಲ್ ನಲ್ಲಿ ಹೊಟೇಲ್ ವೊಂದರ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಹೋಗಿದೆ. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ದುರಸ್ತಿ ಕಾರ್ಯ ನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


ಗಾಳಿ ಮಳೆಗೆ ಕಳೆದ ಎರಡು ದಿನಗಳಿಂದ ಹಲವು ಮರಗಳು ಧರಾಶಾಹಿಯಾಗಿವೆ. ಲಾಲ್ ಬಾಗ್ ಬಳಿ ಫ್ಲೆಕ್ಸ್ ಮುರಿದು ಬಿದ್ದಿದೆ. ಲೇಡಿಹಿಲ್ ನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ದ್ವಿಚಕ್ರ ವಾಹನವೊಂದರ ಸವಾರರು ಪವಾಡಸದೃಶ ಪಾರಾಗಿದ್ದಾರೆ. ನಗರದ ಹೊರವಲಯದ ಬಜಾಲ್ ಸಮೀಪ ಗಾಳಿ ಮಳೆಗೆ ಹೋಟೆಲ್ ಮೇಲೆ ಸೋಮವಾರ ಬೆಳಗ್ಗೆ ಮರ ಬಿದ್ದು ವಿದ್ಯುತ್ ಕಂಬಗಳ ತಂತಿಗೆ ಹಾನಿಯಾಗಿದ್ದು, ಸುತ್ತ ಮುತ್ತ ವಿದ್ಯುತ್ ಸಂಪರ್ಕ ಬೆಳಗ್ಗಿನಿಂದ ಕಡಿತಗೊಂಡಿತು. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ
ಲೈನ್ ಮ್ಯಾನ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸಿದ್ದಾರೆ. ಅಗ್ನಿಶಾಮಕ ಸಿಬಂದಿ ಕೂಡ ಸ್ಥಳಕ್ಕಾಗಮಿಸಿ ಹೋಟೆಲ್ ಮೇಲೆ ಬಿದ್ದ ಮರವನ್ನು ತುಂಡರಿಸಿ ಕಾರ್ಯಾಚರಣೆ ನಡೆಸಿ. ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು