11:45 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಭಾರೀ ವರ್ಷಧಾರೆ: ಬಜಾಲ್ ನಲ್ಲಿ ಹೋಟೆಲ್, ವಿದ್ಯುತ್ ತಂತಿ ಮೇಲೆ ಬಿದ್ದ ಮರ; ಮಳೆಯಲ್ಲೂ ಲೈನ್ ಮ್ಯಾನ್ ದುರಸ್ತಿ ಕಾರ್ಯ

24/07/2023, 20:25

ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ತಗ್ಗು ಪ್ರದೇಶ ಜಲಾವೃತವಾಗಿದೆ. ಬಜಾಲ್ ನಲ್ಲಿ ಹೊಟೇಲ್ ವೊಂದರ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಹೋಗಿದೆ. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ದುರಸ್ತಿ ಕಾರ್ಯ ನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


ಗಾಳಿ ಮಳೆಗೆ ಕಳೆದ ಎರಡು ದಿನಗಳಿಂದ ಹಲವು ಮರಗಳು ಧರಾಶಾಹಿಯಾಗಿವೆ. ಲಾಲ್ ಬಾಗ್ ಬಳಿ ಫ್ಲೆಕ್ಸ್ ಮುರಿದು ಬಿದ್ದಿದೆ. ಲೇಡಿಹಿಲ್ ನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ದ್ವಿಚಕ್ರ ವಾಹನವೊಂದರ ಸವಾರರು ಪವಾಡಸದೃಶ ಪಾರಾಗಿದ್ದಾರೆ. ನಗರದ ಹೊರವಲಯದ ಬಜಾಲ್ ಸಮೀಪ ಗಾಳಿ ಮಳೆಗೆ ಹೋಟೆಲ್ ಮೇಲೆ ಸೋಮವಾರ ಬೆಳಗ್ಗೆ ಮರ ಬಿದ್ದು ವಿದ್ಯುತ್ ಕಂಬಗಳ ತಂತಿಗೆ ಹಾನಿಯಾಗಿದ್ದು, ಸುತ್ತ ಮುತ್ತ ವಿದ್ಯುತ್ ಸಂಪರ್ಕ ಬೆಳಗ್ಗಿನಿಂದ ಕಡಿತಗೊಂಡಿತು. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ
ಲೈನ್ ಮ್ಯಾನ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸಿದ್ದಾರೆ. ಅಗ್ನಿಶಾಮಕ ಸಿಬಂದಿ ಕೂಡ ಸ್ಥಳಕ್ಕಾಗಮಿಸಿ ಹೋಟೆಲ್ ಮೇಲೆ ಬಿದ್ದ ಮರವನ್ನು ತುಂಡರಿಸಿ ಕಾರ್ಯಾಚರಣೆ ನಡೆಸಿ. ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು