12:57 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಸಿಎಂ ನಿವಾಸ ‘ಕಾವೇರಿ’ಯಲ್ಲಿ ಕಾವಿಗಳಿಗೆ ಕವರ್ ಹಂಚಿಕೆ: ಬಿಜೆಪಿ ಹೈಕಮಾಂಡ್ ಗರಂ ? ಹಾಗಾದರೆ ಕವರೊಳಗೆ ಏನಿತ್ತು?

23/07/2021, 12:36

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸುತ್ತಿದ್ದಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಶಾಸಕರು, ಸಂಸದರು, ಆಪ್ತರು ದಿನವಿಡೀ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದರು. ಜತೆಗೆ ಮಠಾಧಿಪತಿಗಳ ದಂಡೇ ಕಾವೇರಿಗೆ ಭೇಟಿ ನೀಡಿತ್ರು. ಈ ಸಂದರ್ಭದಲ್ಲಿ ಮಠಾಧಿಪತಿಗಳಿಗೆ ಸಿಎಂ ನಿವಾಸದಲ್ಲಿ ಕವರ್ ಹಂಚಲಾಗಿತ್ತು. ಇದೀಗ ಪಕ್ಷದ ವರಿಷ್ಠರು ಈ ಕುರಿತು ಗರಂ ಆಗಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಆಪ್ತ ಎನ್ನಲಾದ ಕೆಐಆರ್ ಡಿಸಿಎಲ್ ಅಧ್ಯಕ್ಷ ರುದ್ರೇಶ ಅವರು ಎಲ್ಲ ಸ್ವಾಮಿಗಳಿಗೆ  ಕಾವೇರಿ ನಿವಾಸದಲ್ಲಿ ಒಂದು ಕವರ್ ಹಂಚಿದ್ದಾರೆ. ಕವರ್ ನಲ್ಲಿ ಏನಾದರೂ ಗುಪ್ತ ಸಂದೇಶ ಇತ್ತೇ? ನಗದು, ಚೆಕ್ ಇತ್ತೇ? ಬೇರೆ ಏನಿತ್ತು? ಎಂಬ ಮಾಹಿತಿ ಇದುವರೆಗೆ ಲಭಿಸಿಲ್ಲ.

ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ನಡಾವಳಿಕೆಯಿಂದ ಬಿಜೆಪಿ ಹೈಕಮಾಂಡ್ ಕೆಂಡಾಮಂಡಲವಾಗಿದೆ. ಯಡಿಯೂರಪ್ಪ ಅವರು ಒತ್ತಡ ತಂತ್ರ ಹೇರಬಾರದು ಎಂದು ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.


ಕಾವೇರಿಗೆ ಮೊದಲ ದಿನ ಒಟ್ಟಾಗಿ ಸುಮಾರು 35ಕ್ಕೂ ಹೆಚ್ಚು ವೀರಶೈವ ಲಿಂಗಾಯತ ಸ್ವಾಮೀಜಿಗಳು ಭೇಟಿ ನೀಡಿದ್ದರು. ಇವರೆಲ್ಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಸುವಂತೆ ಹೈಕಮಾಂಡ್ ಒತ್ತಾಯಿಸಿದ್ದರು. ಮಠಾಧಿಪತಿಗಳು ಕಾವೇರಿಗೆ ಭೇಟಿ ನೀಡುತ್ತಿದ್ದಂತೆ ಬಿಜೆಪಿಯೊಳಗೆ ಅಸಮಾಧಾನ ವ್ಯಕ್ತವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು