12:00 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸಿಎಂ ನಿವಾಸ ‘ಕಾವೇರಿ’ಯಲ್ಲಿ ಕಾವಿಗಳಿಗೆ ಕವರ್ ಹಂಚಿಕೆ: ಬಿಜೆಪಿ ಹೈಕಮಾಂಡ್ ಗರಂ ? ಹಾಗಾದರೆ ಕವರೊಳಗೆ ಏನಿತ್ತು?

23/07/2021, 12:36

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸುತ್ತಿದ್ದಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಶಾಸಕರು, ಸಂಸದರು, ಆಪ್ತರು ದಿನವಿಡೀ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದರು. ಜತೆಗೆ ಮಠಾಧಿಪತಿಗಳ ದಂಡೇ ಕಾವೇರಿಗೆ ಭೇಟಿ ನೀಡಿತ್ರು. ಈ ಸಂದರ್ಭದಲ್ಲಿ ಮಠಾಧಿಪತಿಗಳಿಗೆ ಸಿಎಂ ನಿವಾಸದಲ್ಲಿ ಕವರ್ ಹಂಚಲಾಗಿತ್ತು. ಇದೀಗ ಪಕ್ಷದ ವರಿಷ್ಠರು ಈ ಕುರಿತು ಗರಂ ಆಗಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಆಪ್ತ ಎನ್ನಲಾದ ಕೆಐಆರ್ ಡಿಸಿಎಲ್ ಅಧ್ಯಕ್ಷ ರುದ್ರೇಶ ಅವರು ಎಲ್ಲ ಸ್ವಾಮಿಗಳಿಗೆ  ಕಾವೇರಿ ನಿವಾಸದಲ್ಲಿ ಒಂದು ಕವರ್ ಹಂಚಿದ್ದಾರೆ. ಕವರ್ ನಲ್ಲಿ ಏನಾದರೂ ಗುಪ್ತ ಸಂದೇಶ ಇತ್ತೇ? ನಗದು, ಚೆಕ್ ಇತ್ತೇ? ಬೇರೆ ಏನಿತ್ತು? ಎಂಬ ಮಾಹಿತಿ ಇದುವರೆಗೆ ಲಭಿಸಿಲ್ಲ.

ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ನಡಾವಳಿಕೆಯಿಂದ ಬಿಜೆಪಿ ಹೈಕಮಾಂಡ್ ಕೆಂಡಾಮಂಡಲವಾಗಿದೆ. ಯಡಿಯೂರಪ್ಪ ಅವರು ಒತ್ತಡ ತಂತ್ರ ಹೇರಬಾರದು ಎಂದು ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.


ಕಾವೇರಿಗೆ ಮೊದಲ ದಿನ ಒಟ್ಟಾಗಿ ಸುಮಾರು 35ಕ್ಕೂ ಹೆಚ್ಚು ವೀರಶೈವ ಲಿಂಗಾಯತ ಸ್ವಾಮೀಜಿಗಳು ಭೇಟಿ ನೀಡಿದ್ದರು. ಇವರೆಲ್ಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಸುವಂತೆ ಹೈಕಮಾಂಡ್ ಒತ್ತಾಯಿಸಿದ್ದರು. ಮಠಾಧಿಪತಿಗಳು ಕಾವೇರಿಗೆ ಭೇಟಿ ನೀಡುತ್ತಿದ್ದಂತೆ ಬಿಜೆಪಿಯೊಳಗೆ ಅಸಮಾಧಾನ ವ್ಯಕ್ತವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು