3:03 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶವೇ: ಸುಬ್ರಹ್ಮಣ್ಯ ಬಲ್ಯಾಯರ ಗೆಲುವು ದಿಗ್ವಿಜಯಕ್ಕೆ ಮುನ್ನಡಿಯೇ?

27/07/2023, 15:13

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಪುತ್ತಿಲ ಪರಿವಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಪಂ ಚುನಾವಣೆಯ ವಾರ್ಡ್2ರ ಉಪ ಚುನಾವಣೆಯಲ್ಲಿ ಅಕೌಂಟ್ ಓಪನ್ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಯನ್ನು ಪಡೆಯುವಲ್ಲಿ
ಮೇಲುಗೈ ಸಾಧಿಸಿದೆ. ಇದು ದಿಗ್ವಿಜಯಕ್ಕೆ ಮುನ್ನುಡಿ ಎಂದೇ ವ್ಯಾಖ್ಯಾನಿಸಲಾಗಿದೆ.
ಇದು ತಳಮಟ್ಟದ ಪಂಚಾಯಿತಿ ಚುನಾವಣೆಯೇ ಇರಬಹುದು. ಆದರೆ ವ್ಯಕ್ತಿಗತವಾಗಿ ಅರುಣ್ ಕುಮಾರ್ ಪುತ್ತಿಲ ಅವರದ್ದು ಬಲು ದೊಡ್ಡ ಸಾಧನೆ. ಪ್ರಮುಖ ಎರಡು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮುಂದೆ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು ಗೆಲ್ಲುವ ಮೂಲಕ ಸಾಂವಿಧಾನಿಕ ನೆಲೆಗಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೇರೂರುವ ಪ್ರಯತ್ನಕ್ಕೆ ಸಣ್ಣ ಮಟ್ಟಿನ
ಸಫಲತೆ ದೊರಕಿದೆ ಎಂದು ರಾಜಕೀಯ ವಿಶ್ಲೇಷಕರು ವ್ಯಾಖ್ಯಾನ ಮಾಡುತ್ತಾರೆ.


ಯಾವುದೇ ಪಕ್ಷವಿರಲಿ, ಸಂಘಟನೆ ಇರಲಿ ತಳಮಟ್ಟದಿಂದಲೇ ಭದ್ರಗೊಳ್ಳುತ್ತಾ ಹೋಗಬೇಕು. ಈ ನಿಟ್ಟಿನಲ್ಲಿ ಪುತ್ತಿಲ ಪರಿವಾರ ಪಂಚಾಯತ್ ವಾರ್ಡ್ ವೊಂದನ್ನು ಗೆದ್ದುಕೊಂಡಿದೆ. ಇನ್ನೊಂದು ವಾರ್ಡ್ ನಲ್ಲಿ ಎರಡನೇ ಸ್ಥಾನ ಪಡೆದಿದೆ. ಈ ಎರಡೂ ವಾರ್ಡ್ ಗಳಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಯಾಕೆಂದರೆ ಪುತ್ತಿಲ ಅವರು ಬಿಜೆಪಿಯಿಂದ ನಿರ್ಲಕ್ಷಿಸಲ್ಪಟ್ಟವರು. ಸಂಘ ಪರಿವಾರದ ನಾಯಕರು ಅವರ ಅಭ್ಯರ್ಥಿತನವನ್ನು ಪ್ರಬಲವಾಗಿ ವಿರೋಧಿಸಿದ್ದರು. ಪುತ್ತಿಲರ ವಿಷಯ ಬರುವಾಗ ಬಿಜೆಪಿ ಅಂದ್ರೆ ಹಿಂದುತ್ವ. ಬಿಜೆಪಿಗಿಂತ ದೊಡ್ಡ ಹಿಂದುತ್ವ ಇದೆಯೇ ಎಂದು ಆರೆಸ್ಸೆಸ್ ಹಿರಿಯ ನಾಯಕರೊಬ್ಬರು ಪ್ರಶ್ನಿಸಿದ್ದರು. ಅಂದರೆ ಪುತ್ತಿಲರ ಹಿಂದುತ್ವವನ್ನು ಸಂಘಪರಿವಾರ ಪ್ರಶ್ನಿಸಿತ್ತು.
ಇದೀಗ ನಡೆದಿರುವುದು ಇದು ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶ. ಈ ಫಲಿತಾಂಶ ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ಇರಿಸುಮುರಿಸು ತರುವಂತದ್ದೇ ಆಗಿದೆ. ಸಾಮಾನ್ಯವಾಗಿ ಎಷ್ಟೇ ದೊಡ್ಡ ನಾಯಕನಾದರೂ ಪಕ್ಷ ಬಿಟ್ಟು ಪಕ್ಷೇತರನಾಗಿ ನಿಂತರೆ 5 ಸಾವಿರ ಮತ ಪಡೆಯುವುದು ಕಷ್ಟ. ಆದರೆ ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋಲು ಅನುಭವಿಸಿದ್ದಾರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಇದೀಗ ಪಂಚಾಯತಿನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿ ಮೂರನೇ ಸ್ಥಾನದಲ್ಲಿ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದರ್ಥ ಪುತ್ತಿಲ ಪರಿವಾರ ಗ್ರಾಮೀಣ ಪ್ರದೇಶದಲ್ಲೂ ಬೇರೂರುತ್ತಿದೆ ಎನ್ನುವುದು.

ಇತ್ತೀಚಿನ ಸುದ್ದಿ

ಜಾಹೀರಾತು