10:01 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕರಿಮಣಿ ಸರ ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ

28/07/2023, 11:14

ಮಂಗಳೂರು(reporterkarnataka.com): ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕರಿಮಣಿ ಸರ ಕುಸಿದು ಸುಲಿಗೆ ಮಾಡಿದ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
2000, ಡಿಸೆಂಬರ್ 17ರಂದು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹುಸೇನ್ ಅಲಿಯಾಸ್ ಮೊಹಮ್ಮದ್ ಹುಸೇನ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರ ಮೇಲೆ ಕೇಸು ದಾಖಲಿಸಿ ಬಂಧಿಸಲಾಗಿತ್ತು. ಇನ್ನೊರ್ವ ಆರೋಪಿ ಉಳ್ಳಾಲದ
ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಜುಲೈ 26ರಂದು ಆರೋಪಿಯನ್ನು ಮೇಲಾಧಿಕಾರಿಗಳ ಸೂಕ್ತ ಮಾರ್ಗದರ್ಶನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು