8:09 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಬಿ.ಬಿ. ಮಂಜುನಾಥ್, ಉಪಾಧ್ಯಕ್ಷೆಯಾಗಿ ಗೀತಾ ಆಯ್ಕೆ

28/07/2023, 18:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಕೆಡಿಪಿ ಸದಸ್ಯ ಬಿ.ಎಂ.ಭರತ್ ಮಾತನಾಡಿ ‘ ಗ್ರಾಮದ ಏಳಿಗೆಗಾಗಿ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸಿದರೆ ಗ್ರಾಮಾಭಿವೃದ್ದಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವ ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ’ ಪಕ್ಷತೀತಾ ನೆಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಂಡು ಗ್ರಾಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಅವರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹಾಗೂ ಅಭಿಮಾನಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಆರ್.ಹೇಮಂತ್ ರಾಜ್, ಪ್ರಭಾರಿ ಪಿಡಿಒ ಯತೀಶ್ ಕುಮಾರ್, ಬಿಜೆಪಿ ಹೋಬಳಿ ಘಟಕ ಅಧ್ಯಕ್ಷ ಎಂ.ಎಲ್.ವಿಜೇಂದ್ರ, ಶರಣ್, ಸದಸ್ಯರಾದ ಮನೋಜ್,ಪ್ರಕಾಶ್,ಶ್ವೇತಾ, ಜಯಶ್ರೀರಮೇಶ್, .ತಾ.ಪಂ.ಮಾಜಿ ಅಧ್ಯಕ್ಷೆ ಪ್ರಮೀಳ ಮಂಜಯ್ಯ, ಸುಂಕಸಾಲೆ ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ವೈ. ಮಹೇಶ್, ಶಶಿಧರ್ ಜಾವಳಿ,ರಘುಪತಿ,ಬಿ.ಎಸ್.ಕಲ್ಲೇಶ್,ಟಿ.ಎಂ.ಗಜೇಂದ್ರ, ಶಾಮಣ್ಣ ಬಣಕಲ್,ಜಗದೀಶ್, ಸತೀಶ್ ಬಾಳೂರು,ಸಂಜಯ್ ಗೌಡ, ಜೈಪಾಲ್ ಬಿದರಹಳ್ಳಿ, ಮನೋಜ್,ಅಭಿಲಾಷ್,ಚಂದನ್ ಕಾಮತ್,ಪರೀಕ್ಷಿತ್ ಜಾವಳಿ, ವೇಣುಗೋಪಾಲ್ ಪೈ,ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು