2:14 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ

29/07/2023, 12:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನ್ ರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಡಾ. ಸೀತೆಮ್ ವಜ್ಜಲ್ (ಜಿಲ್ಲಾಧ್ಯಕ್ಷರು ಹಾಗೂ ಬಸವಕ್ರಾಂತಿ ಸಂಪಾದಕ ಸಿದ್ದನಗೌಡ ಪಾಟೀಲ್) ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಸ್ತಾವಿಕ ಮಾತನಾಡಲಿದ್ದಾರೆ.
ಇಲಕಲ್ಲಿನ ಪೂಜ್ಯರು ಶ್ರೀಮಾ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು (ಚಿತ್ತರಗಿ ಸಂಸ್ಥಾನ ಇಲ್ಕಲ್),ಸಾನಿಧ್ಯ ಪೂಜ್ಯಶ್ರೀ ಜ್ಞಾನಪೀಠ ಸ್ವಾಮಿಗಳು (ಉರಿಲಿಂಗ ಪೆದ್ದಿ ಮಠ ಮೈಸೂರು) ಉಪಸ್ಥಿತರಿರುವರು. ಶಾಸಕ ಹುನಗುಂದ ವಿಜಯಾನಂದ ಎಸ್. ಕಾಶಪ್ಪನವರ್ ಜ್ಯೋತಿ ಬೆಳಗಿಸಲಿರುವರು. ಮಾಜಿ ಶಾಸಕ
ದೊಡ್ಡನಗೌಡ ಬಿ ಪಾಟೀಲ್ , ಎಸ್ ಆರ್ ನವಲಿ ಹಿರೇಮಠ ಭಾಗವಹಿಸಲಿರುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ದ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸಾಕ್ ಪ್ರಸ್ತಾವನೆ ಮಾಡಲಿದ್ದಾರೆ. ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಘಟಕದಿಂದ ಸುಮಾರು 2000ಕ್ಕೂ ಹೆಚ್ಚು ಪತ್ರಕರ್ತರ ಭಾಗವಹಿಸುವಲಿದ್ದಾರೆ ಎಂದು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವಹ ಪತ್ರಕರ್ತರ ಧ್ವನಿ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು