12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿ.ಟಿ. ರೋಡ್ ಶಾರದಾ ಮಹೋತ್ಸವ ಬೆಳ್ಳಿಹಬ್ಬ: ವಿಜ್ಞಾಪನಾ ಪತ್ರ ಬಿಡುಗಡೆ

29/07/2023, 20:58

ಮಂಗಳೂರು(reporterkarnataka.com):ಶ್ರೀ ಶಾರದಾ ಮಹೋತ್ಸವದ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿ.ಟಿ.ರೋಡ್ ಬಾಲಕ ವೃಂದ (ರಿ) ವತಿಯಿಂದ ಈ ವರ್ಷದ ಶ್ರೀ ಶಾರದಾ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ವಿ.ಟಿ ರಸ್ತೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಉತ್ಸಾಹಿ ಯುವಕರು ಸೇರಿ ಪ್ರತಿ ವರ್ಷ ಇಲ್ಲಿ ಶಾರದೋತ್ಸವವನ್ನು ಬಹಳ ಸಡಗರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷ ವಿ.ಟಿ.ರೋಡ್ ಬಾಲಕ ವೃಂದ 25 ನೇ ವರ್ಷದ ಶಾರದ ಮಹೋತ್ಸವವನ್ನು ಆಚರಿಸಲಿದ್ದು, ಸ್ವರ್ಣ ವೀಣೆ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ದೇವಿಗೆ ಸಮರ್ಪಿಸಲಿದೆ. ಅದಕ್ಕಾಗಿ ಆಸ್ತಿಕ ಭಕ್ತ ಬಾಂಧವರಿಂದ ಉದಾರ ಕೊಡುಗೆಯನ್ನು ಅಪೇಕ್ಷಿಸಿದೆ. ಇಂತಹ ಮಹತ್ಕಾರ್ಯದಲ್ಲಿ ನಾವೆಲ್ಲರೂ ಸಹಕರಿಸಿ ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಂದಿರದ ಅರ್ಚಕರಾದ ವೇದಮೂರ್ತಿ ಕೃಷ್ಣಾನಂದ ಭಟ್, ವಿ.ಟಿ.ರೋಡ್ ಬಾಲಕ ವೃಂದದ ಅಧ್ಯಕ್ಷ ವರುಣ್ ಪೈ, ಕಾರ್ತಿಕ್ ಪೈ, ರಾಜೇಶ್ ಪಡಿಯಾರ್, ನಾರಾಯಣ ನಾಯಕ್, ರಜತ್ ಭಂಡಾರ್ಕರ್, ಉದ್ಯಮಿ ಕುಡ್ಪಿ ಜಗದೀಶ್ ಶೆಣೈ, ಶ್ರೀ ಕೃಷ್ಣ ಮಂದಿರದ ಟ್ರಸ್ಟಿಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು