1:26 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ವಿ.ಟಿ. ರೋಡ್ ಶಾರದಾ ಮಹೋತ್ಸವ ಬೆಳ್ಳಿಹಬ್ಬ: ವಿಜ್ಞಾಪನಾ ಪತ್ರ ಬಿಡುಗಡೆ

29/07/2023, 20:58

ಮಂಗಳೂರು(reporterkarnataka.com):ಶ್ರೀ ಶಾರದಾ ಮಹೋತ್ಸವದ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿ.ಟಿ.ರೋಡ್ ಬಾಲಕ ವೃಂದ (ರಿ) ವತಿಯಿಂದ ಈ ವರ್ಷದ ಶ್ರೀ ಶಾರದಾ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ವಿ.ಟಿ ರಸ್ತೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಉತ್ಸಾಹಿ ಯುವಕರು ಸೇರಿ ಪ್ರತಿ ವರ್ಷ ಇಲ್ಲಿ ಶಾರದೋತ್ಸವವನ್ನು ಬಹಳ ಸಡಗರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷ ವಿ.ಟಿ.ರೋಡ್ ಬಾಲಕ ವೃಂದ 25 ನೇ ವರ್ಷದ ಶಾರದ ಮಹೋತ್ಸವವನ್ನು ಆಚರಿಸಲಿದ್ದು, ಸ್ವರ್ಣ ವೀಣೆ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ದೇವಿಗೆ ಸಮರ್ಪಿಸಲಿದೆ. ಅದಕ್ಕಾಗಿ ಆಸ್ತಿಕ ಭಕ್ತ ಬಾಂಧವರಿಂದ ಉದಾರ ಕೊಡುಗೆಯನ್ನು ಅಪೇಕ್ಷಿಸಿದೆ. ಇಂತಹ ಮಹತ್ಕಾರ್ಯದಲ್ಲಿ ನಾವೆಲ್ಲರೂ ಸಹಕರಿಸಿ ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಂದಿರದ ಅರ್ಚಕರಾದ ವೇದಮೂರ್ತಿ ಕೃಷ್ಣಾನಂದ ಭಟ್, ವಿ.ಟಿ.ರೋಡ್ ಬಾಲಕ ವೃಂದದ ಅಧ್ಯಕ್ಷ ವರುಣ್ ಪೈ, ಕಾರ್ತಿಕ್ ಪೈ, ರಾಜೇಶ್ ಪಡಿಯಾರ್, ನಾರಾಯಣ ನಾಯಕ್, ರಜತ್ ಭಂಡಾರ್ಕರ್, ಉದ್ಯಮಿ ಕುಡ್ಪಿ ಜಗದೀಶ್ ಶೆಣೈ, ಶ್ರೀ ಕೃಷ್ಣ ಮಂದಿರದ ಟ್ರಸ್ಟಿಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು