9:11 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಸಹಿತ 1.47 ಲಕ್ಷ ರೂ. ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ

30/07/2023, 13:09

ಮಂಗಳೂರು(reporterkarnataka.com): ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ಬಜಪೆ ಸಮೀಪ ಬಂಧಿಸಿದ್ದಾರೆ.
ಬಾಳೆಪುಣಿ ಹೊಸಹಿತ್ತಿಲು ನಿವಾಸಿ ಅಬ್ಬಾಸ್(61) ಹಾಗೂ ಮೂಲತ ಮಂಜೇಶ್ವ ಪೈವಳಿಕೆ ನಿವಾಸಿ, ಪ್ರಸ್ತುತ ಕುತ್ತಾರಿನಲ್ಲಿರುವ ಯಶವಂತ ಕುಮಾರ್ (45) ಬಂಧಿತ ಆರೋಪಿಗಳು. ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮೊಬೈಲ್ ಫೋನು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ., ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು