1:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು