11:55 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸ್ನೇಹಾಲಯದಲ್ಲಿ ಮಾನಸಿಕ ಅಸ್ವಸ್ಥರಿಗೆ ಫ್ಯಾಷನ್ ಫೆಸ್ಟ್: ದೇಶದಲ್ಲೇ ಮೊದಲ ಪ್ರಯತ್ನ

01/08/2023, 10:14

ಮಂಗಳೂರು(reporterkarnataka.com): ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್” ನ್ನು ನಡೆಸಲಾಯಿತು. ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಆಗಮಿಸಿದ ಗಣ್ಯರನ್ನು ಪ್ರೀತಿಯಿಂದ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರದ ಶಾಸಕ ಎ.ಕೆ. ಎಂ. ಅಶ್ರಫ್ ಹಾಗೂ ಬ್ರದರ್ ಜೋಸೆಪ್ ಕ್ರಾಸ್ತಾ ಅವರು ಈ ಫ್ಯಾಷನ್ ಫೆಸ್ಟ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ ಫಲಕದ ಅನಾವರಣದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮಂಜೇಶ್ವರದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನ ಮೊಂತೆರೊ, ಖ್ಯಾತ ನಿರೂಪಕರಾದ ವಿ.ಜೆ ಡಿಕ್ಸನ್, ಖ್ಯಾತ ಛಾಯಾಗ್ರಾಹಕ ಶಂಸುದಿನ್ ತಾಂಡಿಲಂ, ಡಿಜೆ ಶಾಡ್ಜ್, ಅಂತಾರಾಷ್ಟ್ರೀಯ ಫ್ಯಾಷನ್ ಶೋ ನಿರ್ದೇಶಕ ಶನೋಜ್ ಇರಾನಿ, ನೃತ್ಯ ಸಂಯೋಜಕಿ ಸಜ್ನಾ ಸಾಜ್, ವಸ್ತ್ರ ವಿನ್ಯಾಸಕಾರರಾದ ಯಜ್ಞೇಶ್ ಅಮೀನ್ ಉಳ್ಳಾಲ್, ರೋಶನ್ ಮಾರ್ಟಿಸ್ – ಮುಖ್ಯ ಸಂಪಾದಕರು, ಕರಾವಳಿ ಸುದ್ದಿ, ಅಲ್ವಿನ್ ಡಿಸೋಜಾ – ಅಧ್ಯಕ್ಷರು, ಕ್ಯಾಥೋಲಿಕ್ ಸಭಾ, ಮಂಗಳೂರು ಪ್ರಾಂತ್ಯ, ನವೀನ್ ಮೊಂತೆರೊ – ಸೌದಿ ಸ್ನೇಹಿತರ ಸಂಘ, ಎಂ.ಎಸ್.ಥಾಮಸ್ – ಸಂಸ್ಥಾಪಕ ಅಧ್ಯಕ್ಷರು ಸಂತೋಷ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಿತಂಗೋಳಿ, ಫ್ಯಾಷನ್ ಮಾಡೆಲ್ ಹಾಗು ಶೋ ಡೈರೆಕ್ಟರ್ ಶೋಭಿತ್ ಹಾಗೂ ವಸ್ತ್ರ ವಿನ್ಯಾಸಗಾರ ರಾದ ಅಕ್ಷಯ ಅವರು ಉಪಸ್ಥಿತರಿದ್ದರು. ಈ ಅಪರೂಪದ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶೋಭಿತ್ ಹಾಗೂ ಅಕ್ಷಯ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಖ್ಯಾತ ಕಾರ್ಯನಿರ್ವಾಹಕಿಯಾದ ಲವಿಟ ಮಿನೇಜಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು