6:55 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸ್ನೇಹಾಲಯದಲ್ಲಿ ಮಾನಸಿಕ ಅಸ್ವಸ್ಥರಿಗೆ ಫ್ಯಾಷನ್ ಫೆಸ್ಟ್: ದೇಶದಲ್ಲೇ ಮೊದಲ ಪ್ರಯತ್ನ

01/08/2023, 10:14

ಮಂಗಳೂರು(reporterkarnataka.com): ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್” ನ್ನು ನಡೆಸಲಾಯಿತು. ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಆಗಮಿಸಿದ ಗಣ್ಯರನ್ನು ಪ್ರೀತಿಯಿಂದ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರದ ಶಾಸಕ ಎ.ಕೆ. ಎಂ. ಅಶ್ರಫ್ ಹಾಗೂ ಬ್ರದರ್ ಜೋಸೆಪ್ ಕ್ರಾಸ್ತಾ ಅವರು ಈ ಫ್ಯಾಷನ್ ಫೆಸ್ಟ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ ಫಲಕದ ಅನಾವರಣದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮಂಜೇಶ್ವರದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನ ಮೊಂತೆರೊ, ಖ್ಯಾತ ನಿರೂಪಕರಾದ ವಿ.ಜೆ ಡಿಕ್ಸನ್, ಖ್ಯಾತ ಛಾಯಾಗ್ರಾಹಕ ಶಂಸುದಿನ್ ತಾಂಡಿಲಂ, ಡಿಜೆ ಶಾಡ್ಜ್, ಅಂತಾರಾಷ್ಟ್ರೀಯ ಫ್ಯಾಷನ್ ಶೋ ನಿರ್ದೇಶಕ ಶನೋಜ್ ಇರಾನಿ, ನೃತ್ಯ ಸಂಯೋಜಕಿ ಸಜ್ನಾ ಸಾಜ್, ವಸ್ತ್ರ ವಿನ್ಯಾಸಕಾರರಾದ ಯಜ್ಞೇಶ್ ಅಮೀನ್ ಉಳ್ಳಾಲ್, ರೋಶನ್ ಮಾರ್ಟಿಸ್ – ಮುಖ್ಯ ಸಂಪಾದಕರು, ಕರಾವಳಿ ಸುದ್ದಿ, ಅಲ್ವಿನ್ ಡಿಸೋಜಾ – ಅಧ್ಯಕ್ಷರು, ಕ್ಯಾಥೋಲಿಕ್ ಸಭಾ, ಮಂಗಳೂರು ಪ್ರಾಂತ್ಯ, ನವೀನ್ ಮೊಂತೆರೊ – ಸೌದಿ ಸ್ನೇಹಿತರ ಸಂಘ, ಎಂ.ಎಸ್.ಥಾಮಸ್ – ಸಂಸ್ಥಾಪಕ ಅಧ್ಯಕ್ಷರು ಸಂತೋಷ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಿತಂಗೋಳಿ, ಫ್ಯಾಷನ್ ಮಾಡೆಲ್ ಹಾಗು ಶೋ ಡೈರೆಕ್ಟರ್ ಶೋಭಿತ್ ಹಾಗೂ ವಸ್ತ್ರ ವಿನ್ಯಾಸಗಾರ ರಾದ ಅಕ್ಷಯ ಅವರು ಉಪಸ್ಥಿತರಿದ್ದರು. ಈ ಅಪರೂಪದ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶೋಭಿತ್ ಹಾಗೂ ಅಕ್ಷಯ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಖ್ಯಾತ ಕಾರ್ಯನಿರ್ವಾಹಕಿಯಾದ ಲವಿಟ ಮಿನೇಜಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು