9:26 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ

02/08/2023, 18:21

ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.
ಅವರು ನಗರದ ಕೊಡಿಯಾಲ್ ಬೈಲ್ ನ ಬಿಷಪ್ಪರ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ಮಾಂಯ್ ಕಿತ್ಯಾಕ್ ರಡ್ತಾ? (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡುತ್ತಿದ್ದರು.
ಸಾಹಿತ್ಯ ಅಕಾಡೆಮಿ, ದೆಹಲಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಸಾಹಿತ್ಯ ಅಕಾಡೆಮಿ, ದೆಹಲಿ ಜನರಲ್ ಕಾವ್ನ್ಸಿಲ್ ಸದಸ್ಯರೂ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ವೇದಿಕೆಗೆ ಬರಮಾಡಿಕೊಂಡು ಹೂಗುಚ್ಛ ನೀಡಿ ಸ್ವಾಗತಿಸಿದರು.


ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು. ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದವನ್ನು ನಡೆಸಿಕೊಟ್ಟು, ವಂದಿಸಿದರು. ಸಾಹಿತ್ಯ ಅಕಾಡೆಮಿ, ದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳಾ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು