2:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ 

15/05/2021, 19:43

ಚಿತ್ರ : ಮಂಜು ನೀರೇಶ್ವಾಲ್ಯ                      ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. 

ಸುಮಾರು 1.7 ಕೋಟಿ ವೆಚ್ಚದಲ್ಲಿ ನೂತನವಾಗಿ ಕಾಷ್ಠ ಶಿಲ್ಪದ ಬ್ರಹ್ಮ ರಥವು ಕೋಟೇಶ್ವರದಲ್ಲಿರುವ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಶಾಲೆ ಯಲ್ಲಿ ನಿರ್ಮಾಣ ಪ್ರಾರಂಭವಾಗಿದ್ದು, ಅಕ್ಷಯ ತ್ರಿತೀಯದ ಪುಣ್ಯ ದಿನದಂದು ಕಾಷ್ಠ ರಥದ ಹೊಸ ಮರದ ಮುಹೂರ್ತ ಪೂಜೆ ನೆರವೇರಿತು. ಮುಂದಿನ ವರ್ಷ ಜರಗಲಿರುವ ಮಂಗಳೂರು ರಥೋತ್ಸವಕ್ಕೆ ನೂತನ ರಥ ನಿರ್ಮಾಣ ಪೂರ್ಣಗೊಂಡು ಶ್ರೀ ದೇವರಿಗೆ ಸಮರ್ಪಣೆ ಗೊಳ್ಳಲಿರುವುದು.  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಆದೇಶ ಪ್ರಕಾರ ರಥ ನಿರ್ಮಾಣ ಕಾರ್ಯ ಪ್ರಾರಂಭಗೊಂಡಿದ್ದು , ಶ್ರೀ ಗಳವರ ದಿವ್ಯ ಉಪಸ್ಥಿತಿಯಲ್ಲಿ ರಥ ಸಮರ್ಪಣೆಗೊಳ್ಳಲಿರುವುದು. ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ದೇವಳದ ತಂತ್ರಿಗಳಾದ ಕಾಶೀನಾಥ್ ಆಚಾರ್ಯ , ಲೆಕ್ಕ ಪರಿಶೋಧಕ ಎಂ . ಜಗನ್ನಾಥ್ ಕಾಮತ್ , ಡಿ ವಾಸುದೇವ್ ಕಾಮತ್ , ಜೀವನ್ ರಾಜ್ ಶೆಣೈ , ರಥಶಿಲ್ಪಿಗಳಾದ ಲಕ್ಷ್ಮಿ ನಾರಾಯಣ ಆಚಾರ್ಯ ಮತ್ತು ಅವರ ಪುತ್ರ ರಾಜಗೋಪಾಲ ಆಚಾರ್ಯ ಅವರ ನೇತ್ರತ್ವದಲ್ಲಿ ನಿರ್ಮಾಣಗೊಳ್ಳಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು