4:29 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮುಂದುವರಿದ ಸಿಸಿಬಿ ಕಾರ್ಯಾಚರಣೆ: 3 ಮಂದಿ ಪೆಡ್ಲರ್ ಗಳ ಬಂಧನ; 10 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

02/08/2023, 23:04

ಮಂಗಳೂರು(reporter Karnataka.com): ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.



ನಂದಾವರದ ಮೊಹಮ್ಮದ್ ಹಫೀಝ್ @ ಅಪ್ಪಿ(35),
ಅಮೀರ್@ ಅಮ್ಮಿ(34), ಹಾಗೂ ಪಾಣೆಮಂಗಳೂರಿನ
ಜಾಕೀರ್ ಹುಸೇನ್ @ ತಾಚೀ(28) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ KA-50-N-8081 ನೇ ಬಿಳಿ ಬಣ್ಣದ ಮಾರುತಿ ಸ್ವಿಪ್ಟ್ ಕಾರಿನಲ್ಲಿಈ ಮೂವರು ಬಂಧಿತ ಆರೋಪಿಗಳು ಮಾದಕ ವಸ್ತುವಾದ MDMA ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ ಒಟ್ಟು 200 ಗ್ರಾಂ ತೂಕದ 10 ಲಕ್ಷ ರೂ.
ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು, 70,000/- ಮೌಲ್ಯದ 3 ಮೊಬೈಲ್ ಫೋನ್ ಗಳು,ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 15,70,500/-ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಜಾಕೀರ್ ಹುಸೇನ್ @ ತಾಚೀ ಎಂಬಾತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣ, ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜ್ಯಾರಿಯಾಗಿರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು