9:09 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

03/08/2023, 20:26

ಬೆಂಗಳೂರು(reporterkarnataka.com): ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್(ಕೆಪಿಎಫ್‍ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪೂರಕವಾಗಿ ಸ್ಪಂದಿಸುವ ಜತೆಗೆ ಸಮಸ್ಯೆ ಪರಿಹಾರಕ್ಕೆ ಭರವಸೆಯನ್ನು ನೀಡಿದರು.
ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ ನೇತೃತ್ವದ ನಿಯೋಗದಿಂದ ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ವಿದ್ಯುತ್ ದರ ಹೆಚ್ಚಳದಿಂದ ಕುಕ್ಕುಟೋದ್ಯಮಕ್ಕೆ ಹೊರೆಯಾಗಿದ್ದು, ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ. ಅಷ್ಟೇ ಅಲ್ಲದೆ ಕೆಲವು ಕೋಳಿ ಘಟಕಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.
ಡಾ. ಸುಶಾಂತ್ ರೈ ಅವರು ಸಂಘದ ಚಟುವಟಿಕೆಗಳು, ಅದರ ಅತ್ಯಾಧುನಿಕ ರೋಗ ನಿರ್ಣಯ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರ ಮತ್ತು ಕೋಳಿ ವಲಯವನ್ನು ಉತ್ತೇಜಿಸಲು ಸರಕಾರ ಮತ್ತು ಸದಸ್ಯರೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ತಿಳಿಸಿದರು.
ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ಅವರು ಕರ್ನಾಟಕದಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರವು ಬೆಳೆದಿರುವ ಹಾಗೂ ಇನ್ನೂ ಹೆಚ್ಚಿನ ಬೆಳವಣಿಗೆಗೆ ಬೇಕಾದ ಸಾಮಾರ್ಥ್ಯವಿದ್ದು ಅದಕ್ಕೆ ಸಚಿವಾಲಯದ ಬೆಂಬಲ ಕೋರಿದರು. ಕೋಳಿ ಸಾಕಾಣಿಕೆ ಕ್ಷೇತ್ರದಲ್ಲಿ ಕೆಪಿಎಫ್‍ಬಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಕೋಳಿ ಸಾಕಾಣೆದಾರರಿಗೆ ಪ್ರಯೋಜನವಾಗುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಸಚಿವರು ತಿಳಿಸಿದರು. ಕೆಪಿಎಫ್‍ಬಿಎ ನಿಯೋಗ ಸಚಿವ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿತು. ಈ ಸಂದರ್ಭ ಎಸ್.ಆರ್.ಆಗ್ರೋ ಫಾರ್ಮ್ಸ್‍ನ ರಾಜೇಶ್ ರೆಡ್ಡಿ ಮತ್ತು ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು