9:47 AM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಮೂಡುಬಿದಿರೆ ಹೋಲಿ ರೋಸರಿ ಪಿಯು ಕಾಲೇಜು ಶಿಕ್ಷಕ- ರಕ್ಷಕ ಸಂಘ‌ ಮಹಾಸಭೆ

04/08/2023, 14:13

ಮೂಡುಬಿದಿರೆ(reporterkarnataka.com) ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮನಶಾಸ್ತ್ರ ಪ್ರಾದ್ಯಾಪಕ ಹಾಗೂ ಯೂಟ್ಯೂಬರ್ ಸ್ಮಿತೇಶ್ ಎಸ್. ಬಾರ್ಯ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಶಿಕ್ಷಣ ಸಂಸ್ಥೆಯು ನಾಲ್ಕು ಚಕ್ರದ ರಥ ಇದ್ದ ಹಾಗೆ ವಿದ್ಯಾರ್ಥಿ, ಪಾಲಕ, ಶಿಕ್ಷಕ, ಆಡಳಿತ ಮಂಡಳಿ ಮತ್ತು ಸಮಾಜ ಈ ನಾಲ್ಕು ವಿಭಾಗಗಳಿಂದ ಸಮಾನ ರೀತಿಯ ಆಸಕ್ತಿ ಮತ್ತು ಪ್ರೋತ್ಸಾಹ ಸಿಕ್ಕಿದಾಗ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ಚಿಂತೆಯನ್ನು ಬಿಟ್ಟು ಚಿಂತನೆಯ ಕಡೆ ಹೋಗಲು ನಾವೆಲ್ಲರೂ ಒಟ್ಟಾಗಿ ಸೇರಬೇಕು. ಅನೇಕ ಸಂದರ್ಭಗಳಲ್ಲಿ ಮಕ್ಕಳಿಗೆ ಪಾಲಕರೆ ಆದರ್ಶ ಪ್ರಾಯರಾಗಿರುತ್ತಾರೆ. ಬದ್ಧತೆ ನಿಷ್ಠೆ ಇವುಗಳನ್ನು ಮಕ್ಕಳು ನೋಡಿ ಅನುಸರಿಸಿ ಕಲಿಯುತ್ತಾರೆ. ಸುಸಂಸ್ಕೃತ ಜವಾಬ್ದಾರಿಯನ್ನು ಪೋಷಕರು ಅನುಸರಿಸುತ್ತಾ ಹೋದರೆ ಮಾದರಿ ಪೋಷಕರಾಗಬಹುದು ಶಿಕ್ಷಣದ ಯಶಸ್ಸಿಗೆ ಹಾಗೂ ವಿದ್ಯಾರ್ಥಿಗಳ ಬದುಕಿನ ಬಗೆಗೆ ಮಾರ್ಗದರ್ಶನ ನೀಡಿದರು.
ಜೋಯ್ಲಿನ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ರಕ್ಷಿತ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ವೇತಾ ಇವರು ಹಿಂದಿನ ವರ್ಷ ನಮ್ಮನಗಲಿದ ಶಿಕ್ಷಕ ರಕ್ಷಕ ಸಂಘದ ಮಾಜಿ ಉಪಾದ್ಯಕ್ಷರಾದ ವಿಜಯ್ ಸುವರ್ಣ ಇವರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಉಪನ್ಯಾಸಕಿ ಜೋವಿಟ ನಿಶಾ ಮಿರಾಂಡ ಅತಿಥಿಗಳ ಪರಿಚಯ ನೀಡಿದರು.


ಶಿಕ್ಷಕ ರಕ್ಷಕ ಸಭೆಯ ವರದಿಯನ್ನು ಸೀಮಾ ಪ್ರಿಯ ಡಿಸೋಜಾ ಮಂಡಿಸಿದರು. 2022- 23 ಸಾಲಿನ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಭೌತಶಾಸ್ತ್ರ ಉಪನ್ಯಾಸಕಿ ಲಾವಣ್ಯರವರು ನಡೆಸಿಕೊಟ್ಟರು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದ ಸಾಧಕರಾದ ನಮ್ಮ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳನ್ನು ಕೂಡ ಸನ್ಮಾನಿಸಲಾಯಿತು ಈ ಕಾರ್ಯಕ್ರಮವನ್ನು ದೈಹಿಕ ನಿರ್ದೇಶಕ ರಿತೇಶ್ ಇರಾ ಇವರು ನಿರ್ವಹಿಸಿದರು.
ಕಾಲೇಜಿನ ಆಡಳಿತಾಧಿಕಾರಿ ಭಗಿನಿ ಎಲೆನ ಎ.ಸಿ ವಿದ್ಯಾರ್ಥಿಗಳಿಗೆ ತಮ್ಮ ಹಿತವಚನ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಸ್ಪೂರ್ತಿದಾಯಕ ಮಾತುಗಳನಾಡಿದರು ಹಾಗೂ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಿಕ್ಷಕ ರಕ್ಷಕ ಸಂಘದ ಪ್ರತಿನಿಧಿ ಮೈಕಲ್ ತಾವ್ರೋ ಕಾರ್ಯಕ್ರಮದಲ್ಲಿ ಉಪಸ್ಥಿತರಿದರು.
ಉಪನ್ಯಾಸಕಿ ವಿಧಿಶ ವಂದಿಸಿದರು.

✍️
ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್

ಇತ್ತೀಚಿನ ಸುದ್ದಿ

ಜಾಹೀರಾತು