2:51 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮೂಡಿಗೆರೆ: ಹಾಡಹಗಲೇ ಗದ್ದೆ, ತೋಟದಲ್ಲಿ ಸುತ್ತಾಡುತ್ತಿರುವ ಕಾಡಾನೆ; ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಸೂಚನೆ

04/08/2023, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಗ್ರಾಮದ ಗದ್ದೆ, ತೋಟಗಳಲ್ಲಿ ಅತ್ತಿಂದಿತ್ತ ಸುತ್ತಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕಸೃಷ್ಟಿಸಿದೆ.
ಬಡವನದಿಣ್ಣೆಯಲ್ಲಿ ಹಾಡಹಗಲೇ ಕಾಡಾನೆಗಳ ಓಡಾಟ ನಡೆಸುತ್ತಿವೆ.ಗ್ರಾಮದ ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಸುತ್ತುತ್ತಿವೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬಡವನದಿಣ್ಣೆ ಮೂಡಿಗೆರೆ ಕೊಟ್ಟಿಗೆಹಾರ ಮುಖ್ಯ ರಸ್ತೆ ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದೆ. ಹಾಗಾಗಿ ಆನೆಗಳು ಮುಖ್ಯರಸ್ತೆಗೆ ಬರುವ ಆತಂಕ ಎದುರಾಗಿದೆ.
ನಿನ್ನೆ ರಾತ್ರಿಯಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿವೆ. ರೈತರ ಕಾಫಿತೋಟಗಳನ್ನು ಪುಡಿಮಾಡುತ್ತಿವೆ. ಇದರಿಂದ ರೈತರು ತೀವ್ರ ನಷ್ಟಕ್ಕೆ ಒಳಗಾಗುತ್ತಿದ್ದಾರೆ.
ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಕಾಡಾನಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಆನೆಗಳು ಸ್ಥಳವನ್ನು ಬಿಟ್ಟು ಕದಲುತ್ತಿಲ್ಲ.
ಈ ಭಾಗದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು