6:54 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಮಂಗಳೂರಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

04/08/2023, 20:32

ಮಂಗಳೂರು(reporterkarnataka.com): ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿದ್ದ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.


ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ರಾಹುಲ್ ಗಾಂಧಿ ಪ್ರಕರಣದಲ್ಲಿ ನ್ಯಾಯಕ್ಕೆ ಜಯಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದು ಸತ್ಯ ಮತ್ತು ಪ್ರೀತಿಗೆ ಸಂದ ಜಯ ಹಾಗೂ ಸುಳ್ಳು ಮತ್ತು ದ್ವೇಷಕ್ಕೆ ಆದ ಸೋಲು. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮಾತನಾಡಿ, ದ್ವೇಷದಿಂದ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ಜನರಿಗೆ ಸತ್ಯಾಂಶ ತಿಳಿದಿದೆ. ದೇಶದಲ್ಲಿ ರಾಹುಲ್ ಗಾಂಧಿ ಅವರ ಬಗೆಗಿನ ಜನಪ್ರೀಯತೆ, ವರ್ಚಸ್ಸು ಹೆಚ್ಚುತ್ತಲೇ ಇದ್ದು, ಬಿಜೆಪಿಗೆ ಸಹಿಲಾಗುತ್ತಿಲ್ಲ ಎಂದರು.
ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ,ಕೆಪಿಸಿಸಿ ವಕ್ತಾರ ಎ.ಸಿ.ವಿನಯರಾಜ್,ಅಶ್ರಫ್ ಬಜಾಲ್, ಸಂಶುದ್ದೀನ್ ಬಂದರ್, ಅನಿಲ್ ಕುಮಾರ್ ಪೂಜಾರಿ, ಲುಕ್ಮಾನ್ ಬಂಟ್ವಾಳ್, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ಕುಮಾರ್ ದಾಸ್, ಮನೋರಾಜ್ ರಾಜೀವ, ಡಾ.ಬಿ.ಜಿ.ಸುವರ್ಣ, ಪದ್ಮನಾಭ ಅಮೀನ್, ಸುಹಾನ್ ಆಳ್ವ, ತನ್ವೀರ್ ಶಾ, ಶಾಂತಲಾ ಗಟ್ಟಿ, ಟಿ.ಹೊನ್ನಯ್ಯ, ಶಬ್ಬೀರ್ ಎಸ್. ನೀರಜ್ ಚಂದ್ರಪಾಲ್, ನಝೀರ್ ಬಜಾಲ್, ವಹಾಬ್ ಕುದ್ರೋಳಿ, ಲಿಯಾಕತ್ ಶಾ, ರವಿ ಪೂಜಾರಿ, ಚೇತನ್ ಕುಮಾರ್, ವಿಕಾಸ್ ಶೆಟ್ಟಿ, ಜಯರಾಜ್ ಕೋಟ್ಯಾನ್, ರಮಾನಂದ ಪೂಜಾರಿ, ಮಜೀದ್ ಬಂದರ್, ಡಿ.ಎಂ.ಮುಸ್ತಫಾ, ನಿತ್ಯಾನಂದ ಶೆಟ್ಟಿ, ರಾಕೇಶ್ ದೇವಾಡಿಗ, ಅಲಿಸ್ಟರ್ ಡಿಕುನ್ಹ, ಮೊಹಮ್ಮದ್ ಕುಂಜತ್ತಬೈಲ್, ಸಲೀಂ ಮಕ್ಕ, ಚಂದ್ರಹಾಸ ಪೂಜಾರಿ, ಸ್ವಾನ್ ಡಿಸೋಜ, ಫಯಾಝ್ ಅಮ್ಮೆಮ್ಮಾರ್, ರೋಬಿನ್ ಅಂಚನ್, ಹಬೀಬ್ ಕಣ್ಣೂರ್, ಟಿ.ಸಿ.ಗಣೇಶ್, ಪ್ರವೀಣ್ ಊರ್ವ, ಪೃಥ್ವಿ ಸಾಲ್ಯಾನ್, ಸೀತಾರಾಂ ಶೆಟ್ಟಿ, ನವೀನ್ ರೈ, ಕಿಶೋರ್, ಚಂದಾವರ್ಕರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚಿತ್ತರಂಜನ್ ಶೆಟ್ಟಿ, ರಫೀಕ್ ಕಣ್ಣೂರ್, ಟಿ.ಕೆ.ಸುಧೀರ್, ಪವನ್ ಸಾಲ್ಯಾನ್, ಜೇಮ್ಸ್ ಶಿವಭಾಗ್, ನಜೀಬ್ ಮಂಚಿ, ಹ್ಯಾಂಡ್ಲಿ ಸೈಮನ್, ಸಾಹಿಲ್, ಓಂಶ್ರೀ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು