10:12 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೆಎಂಎಫ್  ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ

23/07/2021, 17:57

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. 

ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳು

ಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಲುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು