7:35 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು