7:22 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು