1:38 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು