6:41 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

05/08/2023, 13:51

ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ ತಾನು ಬಿಜೆಪಿ ತ್ಯಜಿಸುವ ಅಪಪ್ರಚಾರ ನಡೆಯುತ್ತಿದೆ. ನಾನು ರಾಜಕೀಯ ನಿವೃತ್ತಿಯಾಗುವವರೆಗೆ ಅಥವಾ ನನ್ನ ದೇಹಾಂತ್ಯವಾಗುವವರೆಗೂ ನಾನು ಬಿಜೆಪಿಯಲ್ಲಿ ಮುಂದುವರಿಯುತ್ತೇನೆ. ಆ ಮೂಲಕ ನನ್ನ ಕುರಿತಾದ ಅಪಪ್ರಚಾರಕ್ಕೆ ತೆರೆ ಎಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ನುಡಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ಕೊಡುವ ಬಗ್ಗೆ ಸ್ವಲ್ಪ ಮಟ್ಟಿಗೆ ವಿಶ್ವಾಸವಿದೆ. ಆದರೆ ಪೂರ್ಣ ವಿಶ್ವಾಸವಿಲ್ಲ. ಯಾಕೆಂದರೆ ನನಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದ ಯಾವುದೇ ನಾಯಕರು ಭರವಸೆ ನೀಡಿಲ್ಲ. ನಾನು ಬಿಜೆಪಿ ಸೇರಿ ಹಲವು ತಿಂಗಳಾದರೂ ಪಕ್ಷ ನನಗೆ ಯಾವುದೇ ಪ್ರಮುಖ ಜವಾಬ್ದಾರಿ ಕೊಟ್ಟಿಲ್ಲ. ವಿಧಾನಸಭೆ ಚುನಾವಣೆಗೆ ಒಂದು ತಿಂಗಳ ಮುನ್ನ ಕಾರವಾರ, ಭಟ್ಕಳ, ಬೈಂದೂರು, ಉಡುಪಿ, ಕುಂದಾಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿತ್ತು. ಅಲೆಲ್ಲ ಅಳಿಲ ಸೇವೆ ಮಾಡಿದ್ದೇನೆ ಎಂದು ಅವರು ಹೇಳಿದರು.
ಉಡುಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-18ರ ಅವಧಿಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿತ್ತು ಎಂದು ಹೇಳಿದ್ದಾರೆ. ಕಾನೂನು- ಸುವ್ಯವಸ್ಥೆ ಯಲ್ಲೂ ಉಡುಪಿ ಪ್ರಥಮ ಸ್ಥಾನದಲ್ಲಿತ್ತು. ಆ ಅವಧಿಯಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದೆ. ಬಿಜೆಪಿ ನನ್ನ ಟ್ರ್ಯಾಕ್ ರೆಕಾರ್ಡ್ ಅವಲೋಕಿಸಿ ನನಗೆ ಟಿಕೆಟ್ ನೀಡುವ ಭರವಸೆ ಇದೆ. ನನಗೆ ಟಿಕೆಟ್ ನೀಡದಿದ್ದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು