11:53 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

05/08/2023, 13:51

ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ ತಾನು ಬಿಜೆಪಿ ತ್ಯಜಿಸುವ ಅಪಪ್ರಚಾರ ನಡೆಯುತ್ತಿದೆ. ನಾನು ರಾಜಕೀಯ ನಿವೃತ್ತಿಯಾಗುವವರೆಗೆ ಅಥವಾ ನನ್ನ ದೇಹಾಂತ್ಯವಾಗುವವರೆಗೂ ನಾನು ಬಿಜೆಪಿಯಲ್ಲಿ ಮುಂದುವರಿಯುತ್ತೇನೆ. ಆ ಮೂಲಕ ನನ್ನ ಕುರಿತಾದ ಅಪಪ್ರಚಾರಕ್ಕೆ ತೆರೆ ಎಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ನುಡಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ಕೊಡುವ ಬಗ್ಗೆ ಸ್ವಲ್ಪ ಮಟ್ಟಿಗೆ ವಿಶ್ವಾಸವಿದೆ. ಆದರೆ ಪೂರ್ಣ ವಿಶ್ವಾಸವಿಲ್ಲ. ಯಾಕೆಂದರೆ ನನಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದ ಯಾವುದೇ ನಾಯಕರು ಭರವಸೆ ನೀಡಿಲ್ಲ. ನಾನು ಬಿಜೆಪಿ ಸೇರಿ ಹಲವು ತಿಂಗಳಾದರೂ ಪಕ್ಷ ನನಗೆ ಯಾವುದೇ ಪ್ರಮುಖ ಜವಾಬ್ದಾರಿ ಕೊಟ್ಟಿಲ್ಲ. ವಿಧಾನಸಭೆ ಚುನಾವಣೆಗೆ ಒಂದು ತಿಂಗಳ ಮುನ್ನ ಕಾರವಾರ, ಭಟ್ಕಳ, ಬೈಂದೂರು, ಉಡುಪಿ, ಕುಂದಾಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿತ್ತು. ಅಲೆಲ್ಲ ಅಳಿಲ ಸೇವೆ ಮಾಡಿದ್ದೇನೆ ಎಂದು ಅವರು ಹೇಳಿದರು.
ಉಡುಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-18ರ ಅವಧಿಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿತ್ತು ಎಂದು ಹೇಳಿದ್ದಾರೆ. ಕಾನೂನು- ಸುವ್ಯವಸ್ಥೆ ಯಲ್ಲೂ ಉಡುಪಿ ಪ್ರಥಮ ಸ್ಥಾನದಲ್ಲಿತ್ತು. ಆ ಅವಧಿಯಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದೆ. ಬಿಜೆಪಿ ನನ್ನ ಟ್ರ್ಯಾಕ್ ರೆಕಾರ್ಡ್ ಅವಲೋಕಿಸಿ ನನಗೆ ಟಿಕೆಟ್ ನೀಡುವ ಭರವಸೆ ಇದೆ. ನನಗೆ ಟಿಕೆಟ್ ನೀಡದಿದ್ದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು